
ನಾಗಪುರ – ಭಾರತದ ಎಲ್ಲಾ ಭಾಷೆಗಳ ಬೇರುಗಳು ಸಂಸ್ಕೃತದಲ್ಲಿವೆ. ಸಂಸ್ಕೃತವನ್ನು ಕೇವಲ ಅರ್ಥಮಾಡಿಕೊಳ್ಳುವುದು ಮಾತ್ರವಲ್ಲ, ಅದನ್ನು ಮಾತನಾಡಲು ಸಹ ಬರಬೇಕು. ಸಂಸ್ಕೃತವು ಮನೆಮನೆಗೆ ತಲುಪಬೇಕು ಮತ್ತು ಅದು ಸಂವಹನದ ಮಾಧ್ಯಮವಾಗಬೇಕು ಎಂದು ಪ.ಪೂ. ಸರಸಂಘಚಾಲಕ ಡಾ. ಮೋಹನಜಿ ಭಾಗವತ್ ಕರೆ ನೀಡಿದರು. ಅವರು ಕವಿಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಹೊಸ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು.
ಪ.ಪೂ. ಸರಸಂಘಚಾಲಕರು ಮಾತು ಮುಂದುವರೆಸಿ,
೧. ಪ್ರಸ್ತುತ, ದೇಶದಲ್ಲಿ ಎಲ್ಲೆಡೆ ಸ್ವಾವಲಂಬಿಗಳಾಗುವ ಭಾವನೆ ಇದೆ; ಆದರೆ ಅದಕ್ಕಾಗಿ ನಮ್ಮ ಬೌದ್ಧಿಕ ಸಾಮರ್ಥ್ಯ ಮತ್ತು ಜ್ಞಾನವನ್ನು ಹೆಚ್ಚಿಸುವುದು ಅವಶ್ಯಕ. ಭಾಷೆ ಕೇವಲ ಪದಗಳಲ್ಲ, ಅದು ‘ಭಾವಗಳನ್ನು’ ವ್ಯಕ್ತಪಡಿಸುವ ಮಾಧ್ಯಮವಾಗಿದೆ ಮತ್ತು ನಮ್ಮ ನಿಜವಾದ ಗುರುತು ಭಾಷೆಯೊಂದಿಗೆ ಸಂಬಂಧಿಸಿದೆ.
೨. ಸಂಸ್ಕೃತ ಕೇವಲ ಒಂದು ಭಾಷೆಯಲ್ಲ, ಅದು ಭಾರತೀಯ ಸಂಸ್ಕೃತಿ ಮತ್ತು ಚೇತನದ ವಾಹಕವಾಗಿದೆ, ಸಂಸ್ಕೃತ ತಿಳಿದಿರುವ ವ್ಯಕ್ತಿ ಭಾರತವನ್ನು ಹೆಚ್ಚು ಆಳವಾಗಿ ಅರ್ಥಮಾಡಿಕೊಳ್ಳಬಹುದು.
ಸಂಪಾದಕೀಯ ನಿಲುವುಕಾಂಗ್ರೆಸ್ ‘ಮೃತ’ ಭಾಷೆ ಎಂದು ಕರೆದ ಸಂಸ್ಕೃತವನ್ನು ಪುನರುಜ್ಜೀವನಗೊಳಿಸಲು, ಭಾರತದ ಪ್ರತಿಯೊಂದು ಶಾಲೆಯಲ್ಲಿಯೂ ಸಂಸ್ಕೃತ ಭಾಷೆಯನ್ನು ಕಲಿಸುವುದು ಈಗ ಅತ್ಯಂತ ಅವಶ್ಯಕವಾಗಿದೆ. ಕೇಂದ್ರ ಸರಕಾರವು ತ್ರಿಭಾಷಾ ನೀತಿಯಲ್ಲಿ ಮಾತೃಭಾಷೆಯ ಜೊತೆಗೆ ಸಂಸ್ಕೃತವನ್ನು ಕಲಿಸುವುದನ್ನು ಕಡ್ಡಾಯಗೊಳಿಸಬೇಕು! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ