ಏಮ್ಸ್, ಟಾಟಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸರ್ ಗಂಗಾರಾಮ ಆಸ್ಪತ್ರೆಯ ಸಹಯೋಗ

ಹರಿದ್ವಾರ (ಉತ್ತರಾಖಂಡ) – ಶೀಘ್ರದಲ್ಲೇ, ಏಮ್ಸ್, ಟಾಟಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸರ್ ಗಂಗಾರಾಮ ಆಸ್ಪತ್ರೆಯ ಸಹಯೋಗದೊಂದಿಗೆ, ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಆಧುನಿಕ ವಿಧಾನಗಳನ್ನು ಬಳಸಿ ಚಿಕಿತ್ಸೆ ನೀಡಲಾಗುವುದು. ವಿಶೇಷವೆಂದರೆ, ಈ ಚಿಕಿತ್ಸೆಗಳು ಕಡಿಮೆ ವೆಚ್ಚದಲ್ಲಿ ಲಭ್ಯವಿರುತ್ತವೆ.

ಈ ಉಪಕ್ರಮದ ಮೂಲಕ ವಿಶ್ವ ದರ್ಜೆಯ ಚಿಕಿತ್ಸೆಯನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಯೋಗಋಷಿ ರಾಮದೇವ ಬಾಬಾ ಅವರು ತಿಳಿಸಿದರು. ಇಲ್ಲಿ ಪತಂಜಲಿ ವಿಶ್ವವಿದ್ಯಾಲಯ, ಪತಂಜಲಿ ಸಂಶೋಧನಾ ಸಂಸ್ಥೆ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 2 ದಿನಗಳ ಅನಾಮಯಮ್ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದ ಕಾರ್ಯಕ್ರಮದಲ್ಲಿ ರಾಮದೇವ ಬಾಬಾ ಮಾತನಾಡುತ್ತಿದ್ದರು.
16 ರಾಜ್ಯಗಳಿಂದ 300ಕ್ಕೂ ಹೆಚ್ಚು ಪ್ರತಿನಿಧಿಗಳ ಸಹಭಾಗ

ಆಯುರ್ವೇದ ಮತ್ತು ಆಧುನಿಕ ಔಷಧಿಗಳ ಸಮನ್ವಯ ಮತ್ತು ಸಂಯೋಜಿಸುವ ಉದ್ದೇಶದಿಂದ ಹಾಗೆಯೇ ಜಾಗತಿಕ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ದೇಶದಾದ್ಯಂತ ಸುಮಾರು 16 ರಾಜ್ಯಗಳ 200 ಶೈಕ್ಷಣಿಕ ಸಂಸ್ಥೆಗಳಿಂದ 300ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು. ಇದು ‘ಆನ್ಲೈನ್’ ಮತ್ತು ‘ಆಫ್ಲೈನ್’ ಎರಡೂ ವಿಧಾನಗಳಲ್ಲಿತ್ತು. ಈ ಸಮ್ಮೇಳನದಲ್ಲಿ ದೇಶದ ವಿವಿಧ ಹೆಸರಾಂತ ವೈದ್ಯಕೀಯ ಮತ್ತು ಶೈಕ್ಷಣಿಕ ಸಂಸ್ಥೆಗಳ ತಜ್ಞರು ಮತ್ತು ಸಂಶೋಧಕರು ಕೂಡ ಭಾಗವಹಿಸಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ