ಏಮ್ಸ್, ಟಾಟಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸರ್ ಗಂಗಾರಾಮ ಆಸ್ಪತ್ರೆಯ ಸಹಯೋಗ

ಹರಿದ್ವಾರ (ಉತ್ತರಾಖಂಡ) – ಶೀಘ್ರದಲ್ಲೇ, ಏಮ್ಸ್, ಟಾಟಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸರ್ ಗಂಗಾರಾಮ ಆಸ್ಪತ್ರೆಯ ಸಹಯೋಗದೊಂದಿಗೆ, ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಆಧುನಿಕ ವಿಧಾನಗಳನ್ನು ಬಳಸಿ ಚಿಕಿತ್ಸೆ ನೀಡಲಾಗುವುದು. ವಿಶೇಷವೆಂದರೆ, ಈ ಚಿಕಿತ್ಸೆಗಳು ಕಡಿಮೆ ವೆಚ್ಚದಲ್ಲಿ ಲಭ್ಯವಿರುತ್ತವೆ.

ಈ ಉಪಕ್ರಮದ ಮೂಲಕ ವಿಶ್ವ ದರ್ಜೆಯ ಚಿಕಿತ್ಸೆಯನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಯೋಗಋಷಿ ರಾಮದೇವ ಬಾಬಾ ಅವರು ತಿಳಿಸಿದರು. ಇಲ್ಲಿ ಪತಂಜಲಿ ವಿಶ್ವವಿದ್ಯಾಲಯ, ಪತಂಜಲಿ ಸಂಶೋಧನಾ ಸಂಸ್ಥೆ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 2 ದಿನಗಳ ಅನಾಮಯಮ್ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದ ಕಾರ್ಯಕ್ರಮದಲ್ಲಿ ರಾಮದೇವ ಬಾಬಾ ಮಾತನಾಡುತ್ತಿದ್ದರು.
16 ರಾಜ್ಯಗಳಿಂದ 300ಕ್ಕೂ ಹೆಚ್ಚು ಪ್ರತಿನಿಧಿಗಳ ಸಹಭಾಗ

ಆಯುರ್ವೇದ ಮತ್ತು ಆಧುನಿಕ ಔಷಧಿಗಳ ಸಮನ್ವಯ ಮತ್ತು ಸಂಯೋಜಿಸುವ ಉದ್ದೇಶದಿಂದ ಹಾಗೆಯೇ ಜಾಗತಿಕ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ದೇಶದಾದ್ಯಂತ ಸುಮಾರು 16 ರಾಜ್ಯಗಳ 200 ಶೈಕ್ಷಣಿಕ ಸಂಸ್ಥೆಗಳಿಂದ 300ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು. ಇದು ‘ಆನ್ಲೈನ್’ ಮತ್ತು ‘ಆಫ್ಲೈನ್’ ಎರಡೂ ವಿಧಾನಗಳಲ್ಲಿತ್ತು. ಈ ಸಮ್ಮೇಳನದಲ್ಲಿ ದೇಶದ ವಿವಿಧ ಹೆಸರಾಂತ ವೈದ್ಯಕೀಯ ಮತ್ತು ಶೈಕ್ಷಣಿಕ ಸಂಸ್ಥೆಗಳ ತಜ್ಞರು ಮತ್ತು ಸಂಶೋಧಕರು ಕೂಡ ಭಾಗವಹಿಸಿದ್ದರು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ