|

ಪುಣೆ – ಮುಕುಂದನಗರದಲ್ಲಿರುವ ಅನಧಿಕೃತ ‘ಹಜರತ್ ದಂ ದಂ ಶಾಹ್ ಆಲಿ ಬಾಬಾ ದರ್ಗಾ’ ಹೆಸರಿನಲ್ಲಿ ಫುಟ್ಪಾತ್ ಮೇಲೆ ನಡೆದಿರುವ ಒತ್ತುವರಿಯನ್ನು ತೆರವುಗೊಳಿಸಬೇಕೆಂದು ಹಿಂದುತ್ವನಿಷ್ಠ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಿವೆ. ಈ ಬೇಡಿಕೆಗೆ ಬೆಂಬಲವಾಗಿ ಸಕಲ ಹಿಂದೂ ಸಮಾಜದ ವತಿಯಿಂದ ಆಗಸ್ಟ್ 2 ರಂದು ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಜಪದ ಶಾಸಕ ಯೋಗೇಶ ತಿಳೇಕರ ಭಾಗವಹಿಸಿದ್ದರು. ಆರಂಭದಲ್ಲಿ ದರ್ಗಾದ ಜಾಗದಲ್ಲಿ ಪ್ರತಿಭಟನೆ ನಡೆಸಲು ಅವರು ಪ್ರಯತ್ನಿಸಿದರು; ಆದರೆ ಪೊಲೀಸರು ಅವರನ್ನು ಘಟನಾ ಸ್ಥಳಕ್ಕೆ ಬಿಡಲಿಲ್ಲ. ಆದ್ದರಿಂದ, ಅವರು ಲಕ್ಷ್ಮೀ ನಾರಾಯಣ ಚೌಕ್ನಲ್ಲಿ ಪ್ರತಿಭಟನೆ ನಡೆಸಿದರು. ‘ಅನಧಿಕೃತ ದರ್ಗಾವನ್ನು 15 ದಿನಗಳೊಳಗೆ ತೆರವುಗೊಳಿಸದಿದ್ದರೆ, ಅಲ್ಲಿ ಮಾರುತಿ ದೇವಸ್ಥಾನವನ್ನು ಕಟ್ಟಲಾಗುವುದು’ ಎಂದು ಶಾಸಕ ತಿಳೇಕರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಎಚ್ಚರಿಕೆ ನೀಡಿದರು. ಪೊಲೀಸರು ಈ ಪ್ರತಿಭಟನೆಯನ್ನು ನಿಲ್ಲಿಸಲು ಪ್ರತಿಭಟನಾಕಾರರನ್ನು ಬಂಧಿಸಿದರು. (ಹಿಂದೂಗಳನ್ನು ಬಂಧಿಸುವ ಪೊಲೀಸರು ಮತಾಂಧರ ಮುಂದೆ ತಲೆಬಾಗುತ್ತಾರೆ! – ಸಂಪಾದಕರು) ದರ್ಗಾದ ಸುತ್ತಮುತ್ತಲಿನ ಎಲ್ಲಾ ರಸ್ತೆಗಳನ್ನು ತಡೆಗೋಡೆಗಳನ್ನು ಹಾಕಿ ಬಂದ್ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು 7 ಪೊಲೀಸ್ ವಾಹನಗಳನ್ನು ನಿಯೋಜಿಸಲಾಗಿತ್ತು. ಸಕಲ ಹಿಂದೂ ಸಮಾಜದ ಪ್ರತಿಭಟನೆ ನಡೆಯುತ್ತಿದ್ದಾಗ, ಕೆಲವು ಮುಸ್ಲಿಂ ಮತ್ತು ದಲಿತ ಸಂಘಟನೆಗಳು ದರ್ಗಾದ ಕಡೆಯಿಂದಲೂ ಪ್ರತಿಭಟನೆ ನಡೆಸಿದವು.
ಸಂಪಾದಕೀಯ ನಿಲುವುಇಂತಹ ಎಚ್ಚರಿಕೆ ಏಕೆ ನೀಡಬೇಕಾಗುತ್ತದೆ? ಆಡಳಿತ ತಾನಾಗಿಯೇ ಕ್ರಮ ತೆಗೆದುಕೊಳ್ಳಲು ಏಕೆ ಬಯಸುವುದಿಲ್ಲ? |
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !