ಶಾಸಕ ಜಿತೇಂದ್ರ ಅವ್ಹಾಡ್ ಅವರ ಸನಾತನ ವಿರೋಧಿ ಹೇಳಿಕೆಗಳ ಬಗ್ಗೆ ಯೋಗ ಋಷಿ ರಾಮದೇವ ಬಾಬಾ ಅವರ ಟೀಕೆ

ಹರಿದ್ವಾರ (ಉತ್ತರಾಖಂಡ) – ಹಿಂದೂ ಧರ್ಮದಲ್ಲಿ ಜನಿಸಿದ ಕೆಲವರು ಧರ್ಮಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಯಾವ ಧರ್ಮ ಮತ್ತು ಸಂಸ್ಕೃತಿಯಲ್ಲಿ ಅವರು ಜನಿಸಿದ್ದಾರೋ, ಯಾವ ಪೂರ್ವಜರ ವಂಶಸ್ಥರು ಅವರು ಆಗಿದ್ದಾರೋ, ಅವರನ್ನೇ ಹಿಂದೂ ಭಯೋತ್ಪಾದನೆ, ಸನಾತನ ಭಯೋತ್ಪಾದನೆ ಎಂದು ಕರೆಯುತ್ತಿದ್ದಾರೆ. ಯಾವುದೇ ಘಟನೆ ನಡೆದಾಗ, ಈ ಜನರು ‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳುತ್ತಾರೆ; ಆದರೆ ಹಿಂದೂ, ಹಿಂದುತ್ವ ಮತ್ತು ಸನಾತನ ಧರ್ಮವನ್ನು ಭಯೋತ್ಪಾದನೆಯೊಂದಿಗೆ ಜೋಡಿಸುವ ಮೂಲಕ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ವಿವಾದವನ್ನು ಸೃಷ್ಟಿಸಲಾಗುತ್ತಿದೆ. ಅಲ್ಲದೆ, ಅವರು ದೇಶದ ಸಂವಿಧಾನದ ಭಾವನೆಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಈಶ್ವರ ಅವರಿಗೆ ಒಳ್ಳೆಯ ಬುದ್ಧಿ ನೀಡಲಿ ಮತ್ತು ಅವರು ರಾಜಕೀಯದಿಂದ ಶೀಘ್ರದಲ್ಲೇ ‘ಮೋಕ್ಷ’ ಪಡೆಯಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಯೋಗ ಋಷಿ ರಾಮದೇವ ಬಾಬಾ ಅವರು ಶರದ ಚಂದ್ರ ಪವಾರ ಬಣದ ಶಾಸಕ ಜಿತೇಂದ್ರ ಅವ್ಹಾಡ ಅವರನ್ನು ಟೀಕಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಅವ್ಹಾಡ್ ಅವರು ‘ಸನಾತನ ಧರ್ಮ ಎಂಬ ಯಾವುದೇ ವಿಷಯ ಅಸ್ತಿತ್ವದಲ್ಲಿ ಇರಲಿಲ್ಲ, ಅದು ಕೇವಲ ಒಂದು ಸಿದ್ಧಾಂತವಾಗಿದ್ದು, ಭಾರತಕ್ಕೆ ಹಾನಿ ಮಾಡಿದೆ’ ಎಂದು ಹೇಳಿಕೆ ನೀಡಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ