ಶಾಸಕ ಜಿತೇಂದ್ರ ಅವ್ಹಾಡ್ ಅವರ ಸನಾತನ ವಿರೋಧಿ ಹೇಳಿಕೆಗಳ ಬಗ್ಗೆ ಯೋಗ ಋಷಿ ರಾಮದೇವ ಬಾಬಾ ಅವರ ಟೀಕೆ

ಹರಿದ್ವಾರ (ಉತ್ತರಾಖಂಡ) – ಹಿಂದೂ ಧರ್ಮದಲ್ಲಿ ಜನಿಸಿದ ಕೆಲವರು ಧರ್ಮಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಯಾವ ಧರ್ಮ ಮತ್ತು ಸಂಸ್ಕೃತಿಯಲ್ಲಿ ಅವರು ಜನಿಸಿದ್ದಾರೋ, ಯಾವ ಪೂರ್ವಜರ ವಂಶಸ್ಥರು ಅವರು ಆಗಿದ್ದಾರೋ, ಅವರನ್ನೇ ಹಿಂದೂ ಭಯೋತ್ಪಾದನೆ, ಸನಾತನ ಭಯೋತ್ಪಾದನೆ ಎಂದು ಕರೆಯುತ್ತಿದ್ದಾರೆ. ಯಾವುದೇ ಘಟನೆ ನಡೆದಾಗ, ಈ ಜನರು ‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳುತ್ತಾರೆ; ಆದರೆ ಹಿಂದೂ, ಹಿಂದುತ್ವ ಮತ್ತು ಸನಾತನ ಧರ್ಮವನ್ನು ಭಯೋತ್ಪಾದನೆಯೊಂದಿಗೆ ಜೋಡಿಸುವ ಮೂಲಕ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ವಿವಾದವನ್ನು ಸೃಷ್ಟಿಸಲಾಗುತ್ತಿದೆ. ಅಲ್ಲದೆ, ಅವರು ದೇಶದ ಸಂವಿಧಾನದ ಭಾವನೆಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಈಶ್ವರ ಅವರಿಗೆ ಒಳ್ಳೆಯ ಬುದ್ಧಿ ನೀಡಲಿ ಮತ್ತು ಅವರು ರಾಜಕೀಯದಿಂದ ಶೀಘ್ರದಲ್ಲೇ ‘ಮೋಕ್ಷ’ ಪಡೆಯಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಯೋಗ ಋಷಿ ರಾಮದೇವ ಬಾಬಾ ಅವರು ಶರದ ಚಂದ್ರ ಪವಾರ ಬಣದ ಶಾಸಕ ಜಿತೇಂದ್ರ ಅವ್ಹಾಡ ಅವರನ್ನು ಟೀಕಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಅವ್ಹಾಡ್ ಅವರು ‘ಸನಾತನ ಧರ್ಮ ಎಂಬ ಯಾವುದೇ ವಿಷಯ ಅಸ್ತಿತ್ವದಲ್ಲಿ ಇರಲಿಲ್ಲ, ಅದು ಕೇವಲ ಒಂದು ಸಿದ್ಧಾಂತವಾಗಿದ್ದು, ಭಾರತಕ್ಕೆ ಹಾನಿ ಮಾಡಿದೆ’ ಎಂದು ಹೇಳಿಕೆ ನೀಡಿದ್ದರು.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !