ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆರೋಪ

ಕೋಲಕಾತಾ – ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಬೆಂಗಾವಲು ವಾಹನದ ಮೇಲೆ ಕೂಚ ಬಿಹಾರ ಜಿಲ್ಲೆಯಲ್ಲಿ ದಾಳಿ ಮಾಡಲಾಗಿದೆ. ಪ್ರತಿಭಟನೆಯ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಅವರ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದರು; ಆದರೆ, ಈ ಆರೋಪಗಳು ಪೂರ್ವನಿಯೋಜಿತ ಪಿತೂರಿ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
1. ಸುವೇಂದು ಅಧಿಕಾರಿ ಅವರು ಕೂಚಬಿಹಾರ ಪೊಲೀಸ ಅಧೀಕ್ಷಕರ ಕಚೇರಿಯ ಹೊರಗೆ ಭಾಜಪ ಪ್ರತಿಭಟನೆಯನ್ನು ಮುನ್ನಡೆಸಲು ಉತ್ತರ ಬಂಗಾಳ ಜಿಲ್ಲೆಗೆ ತೆರಳಿದ್ದರು. ಈ ವೇಳೆ ಅವರಿಗೆ ಘೋಷಣೆಗಳನ್ನು ಎದುರಿಸಬೇಕಾಯಿತು. ಅಲ್ಲದೆ, ಖಗರಾಬಾಡಿ ಪ್ರದೇಶದಲ್ಲಿ ಅವರ ಬೆಂಗಾವಲು ವಾಹನಕ್ಕೆ ಕಪ್ಪು ಬಾವುಟಗಳನ್ನು ತೋರಿಸಲಾಯಿತು.
2. ಭಾಜಪ ನಾಯಕರು ಮಾಹಿತಿ ನೀಡಿದ ಪ್ರಕಾರ, ಕಪ್ಪು ಬಾವುಟಗಳನ್ನು ಹಿಡಿದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಖಗರಾಬಾಡಿ ಚೌಕದಲ್ಲಿ ಜಮಾಯಿಸಿದ್ದರು. ಸುವೇಂದು ಅಧಿಕಾರಿ ಅವರ ಬೆಂಗಾವಲು ವಾಹನ ಆ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ, ಈ ಕಾರ್ಯಕರ್ತರು ‘ಹಿಂದಕ್ಕೆ ಹೋಗಿ’ ಎಂದು ಘೋಷಣೆಗಳನ್ನು ಕೂಗಿದರು ಮತ್ತು ಅವರ ಕಾರಿನ ಮೇಲೆ ಚಪ್ಪಲಿಗಳನ್ನು ಎಸೆದರು.
ಸಂಪಾದಕೀಯ ನಿಲುವುಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಅಲ್ಲಿ ಕೇಂದ್ರ ಸರಕಾರವು ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಬೇಕು ಎಂದು ಅಪೇಕ್ಷೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!