ಉತ್ತರ ಪ್ರದೇಶದ ಯೋಗಿ ಸರಕಾರದ ಶ್ಲಾಘನೀಯ ನಿರ್ಧಾರ

ಲಕ್ಷ್ಮಣಪುರಿ – ಆಗಸ್ಟ್ 8 ರಿಂದ 10, 2025 ರ ಈ ಅವಧಿಯಲ್ಲಿ ಉತ್ತರ ಪ್ರದೇಶದ ಮಹಿಳೆಯರಿಗೆ ರಕ್ಷಾ ಬಂಧನದ ನಿಮಿತ್ತ ರಾಜ್ಯ ಸಾರಿಗೆ ನಿಗಮ ಮತ್ತು ನಗರ ಬಸ್ ಸೇವೆಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ದೊರೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಘೋಷಣೆ ಮಾಡಿದ್ದಾರೆ. ರಕ್ಷಾ ಬಂಧನದ ನಿಮಿತ್ತ ಮಹಿಳೆಯರು ತಮ್ಮ ಸಹೋದರರ ಬಳಿಗೆ ಸುಲಭವಾಗಿ ಹೋಗಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೂರು ದಿನಗಳ ಕಾಲ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾದ್ದರಿಂದ, ರಾಜ್ಯದ ಅನೇಕ ಕುಟುಂಬಗಳಲ್ಲಿ ಹಬ್ಬದ ಉತ್ಸಾಹ ಹೆಚ್ಚಾಗಲಿದೆ.
1. ಈ ಸೌಲಭ್ಯವು ಇಡೀ ಉತ್ತರ ಪ್ರದೇಶದಲ್ಲಿ ಜಾರಿಯಲ್ಲಿರುತ್ತದೆ. ಆಗಸ್ಟ್ 8 ರಂದು ಬೆಳಿಗ್ಗೆ 10 ಗಂಟೆಯಿಂದ ಆಗಸ್ಟ್ 10 ರ ರಾತ್ರಿ 12 ಗಂಟೆಯವರೆಗೆ ಮಹಿಳೆಯರು ಈ ಉಚಿತ ಪ್ರಯಾಣದ ಪ್ರಯೋಜನ ಪಡೆಯಬಹುದು. ಈ ಸಮಯದಲ್ಲಿ, ಯಾವುದೇ ಟಿಕೆಟ್ ಇಲ್ಲದೆ ಮಹಿಳೆಯರು ಬಸ್ ಸೇವೆಯನ್ನು ಬಳಸಬಹುದು.
2. ಈ ಅವಧಿಯಲ್ಲಿ ಸಾಕಷ್ಟು ಬಸ್ ಸೇವೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲಕ್ಷ್ಮಣಪುರಿ, ಕಾನ್ಪುರ, ಗೋರಖ್ಪುರದಂತಹ ದೊಡ್ಡ ನಗರಗಳಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲು ಆದೇಶ ನೀಡಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!