2022ರಲ್ಲಿ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಧರ್ಮಸ್ಥಳವನ್ನು ಗುರಿಯಾಗಿಸುವ ಉಗ್ರರ ಸಂಚು ಇತ್ತು

ಮಂಗಳೂರು – 2022 ರಲ್ಲಿ ಇಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸುವ ಮಾಹಿತಿ ಬೆಳಕಿಗೆ ಬಂದಿದೆ. ಭಯೋತ್ಪಾದಕನು ಈ ಸ್ಫೋಟವನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆಸಲು ಯೋಜಿಸಿದ್ದರು. ಆದರೆ, ಅದರ ಟೈಮರ್ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್‌ಗಳಿಗೆ ಇರಿಸಿದ್ದರಿಂದ, ಅದು ದಾರಿಯಲ್ಲಿ ಆಟೋ ರಿಕ್ಷಾದಲ್ಲಿಯೇ ಸ್ಫೋಟಗೊಂಡಿದೆ. ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಬಹಿರಂಗಗೊಂಡಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ದೇವಸ್ಥಾನದಲ್ಲಿ ಬಾಂಬ್ ಸ್ಫೋಟಿಸುವ ಸಂಚು ರೂಪಿಸಿದ್ದನು.