|
(ಮೌಲ್ವಿ ಎಂದರೆ ಇಸ್ಲಾಂ ಧರ್ಮದ ಧಾರ್ಮಿಕ ಮುಖಂಡ)

ಬೆಳಗಾವಿ – ಇಲ್ಲಿನ ಕಾಮುಕ ಮೌಲ್ವಿಯೊಬ್ಬ 2 ವರ್ಷಗಳ ಹಿಂದೆ 5 ವರ್ಷದ ಬಾಲಕಿಯನ್ನು ಮಸೀದಿಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಮಾಹಿತಿಯನ್ನು ಹಿಂದುತ್ವನಿಷ್ಠ ಪುನೀತ್ ಕೆರೆಹಳ್ಳಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಕಾಮುಕ ಮೌಲ್ವಿಯನ್ನು ಬಂಧಿಸಿದ್ದಾರೆ.
ಜಿಲ್ಲೆಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 2 ವರ್ಷಗಳ ಹಿಂದೆ ಮಸೀದಿಯ ಮೌಲ್ವಿಯಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು; ಆದರೆ ಮಗಳ ಭವಿಷ್ಯ ಮತ್ತು ಸಾಮಾಜಿಕ ಘನತೆಗೆ ಹೆದರಿ ಸಂತ್ರಸ್ತ ಕುಟುಂಬ ದೂರು ನೀಡಿರಲಿಲ್ಲ.

ನಂತರ ಸಂತ್ರಸ್ತೆಯ ತಂದೆ ಹಿಂದುತ್ವನಿಷ್ಠ ಪುನೀತ್ ಕೆರೆಹಳ್ಳಿ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಮಗಳ ಮೇಲಾದ ಅನ್ಯಾಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಕೆರೆಹಳ್ಳಿ ಅವರು ಘಟನೆಯ ಸಂಪೂರ್ಣ ಮಾಹಿತಿ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಮೇಲೆ ಪೊಲೀಸರು ಕಾನೂನು ಪ್ರಕಾರ ಸ್ವಯಂಪ್ರೇರಿತರಾಗಿ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬದಿಂದ ಅಧಿಕೃತ ದೂರು ದಾಖಲಿಸಿಕೊಂಡಿದ್ದಾರೆ. (ಬೆಳಗಾವಿ ಪೊಲೀಸರ ತ್ವರಿತ ಕ್ರಮ ಶ್ಲಾಘನೀಯ! ಸಂತ್ರಸ್ತ ಕುಟುಂಬ ಪೊಲೀಸರ ಬಳಿಗೆ ಹೋಗದೆ ಹಿಂದೂ ಮುಖಂಡನ ಬಳಿ ನ್ಯಾಯಕ್ಕಾಗಿ ಮೊರೆ ಹೋಗಬೇಕಾಯಿತು, ಈ ಬಗ್ಗೆ ಪೊಲೀಸರು ಆತ್ಮಾವಲೋಕನ ಮಾಡಿಕೊಳ್ಳಬೇಕು! – ಸಂಪಾದಕರು)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ