ಸಮಾಜವಾದಿ ಪಕ್ಷದ ಸಂಸದ ಎಸ್.ಟಿ. ಹಸನ್ ಅವರ ಉತ್ತರಾಖಂಡ ಪ್ರವಾಹದ ಕುರಿತ ಹೇಳಿಕೆ

ಡೆಹ್ರಾಡೂನ್ (ಉತ್ತರಾಖಂಡ) – ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮವು ಪ್ರವಾಹದ ನೀರಿನೊಂದಿಗೆ ಬಂದ ಮಣ್ಣಿನಿಂದ ಸಂಪೂರ್ಣವಾಗಿ ಮುಚ್ಚಿಹೋಯಿತು. ಇದರಲ್ಲಿ ಹಲವು ಜನರು ಮೃತಪಟ್ಟಿರುವಾಗ, ಇದರ ಕುರಿತು ಸಮಾಜವಾದಿ ಪಕ್ಷದ ಸಂಸದ ಎಸ್.ಟಿ. ಹಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು, ‘ಇದು ಅತ್ಯಂತ ಹೃದಯವಿದ್ರಾವಕ ಘಟನೆ. ಈ ವಿಪತ್ತುಗಳು ಏಕೆ ಬರುತ್ತವೆ ಎಂಬುದರ ಕಡೆಗೆ ಮೊದಲು ಗಮನ ನೀಡಬೇಕು. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇತರೆ ಧರ್ಮಗಳಿಗೆ (ಹಿಂದೂ ಧರ್ಮ ಹೊರತುಪಡಿಸಿ) ಯಾವುದೇ ಗೌರವ ನೀಡಲಾಗುವುದಿಲ್ಲ. ಯಾವುದೇ ಧಾರ್ಮಿಕ ಸ್ಥಳದ ಮೇಲೆ ಬುಲ್ಡೋಜರ್ ಚಲಾಯಿಸಬಾರದು. ಈ ಜಗತ್ತನ್ನು ನಡೆಸುವವನು ಬೇರೆ ಯಾರೋ ಇದ್ದಾನೆ ಮತ್ತು ಅವನ ನ್ಯಾಯವಾದಾಗ ಮನುಷ್ಯ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
🗣️ SP MP S.T. Hasan on Uttarakhand floods:
“As bulldozers were run over prayer sites of other religions, the village of Dharali faced disaster.”
❓ And what causes disasters in Pakistan, Afghanistan, Bangladesh, or other Islamic nations?
Why not admit the truth, Hasan -… pic.twitter.com/12UIKlSopU
— Sanatan Prabhat (@SanatanPrabhat) August 9, 2025
ಈ ಹೇಳಿಕೆಯಿಂದ ಹಸನ್ ಅವರ ಮೇಲೆ ಟೀಕೆಗಳು ವ್ಯಕ್ತವಾದಾಗ, ಅವರು ಸ್ಪಷ್ಟನೆ ನೀಡುತ್ತಾ, ‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಪ್ರಾರ್ಥನಾ ಸ್ಥಳಗಳ ಮೇಲೆ ಬುಲ್ಡೋಜರ್ ಚಲಾಯಿಸಬಾರದು, ಬೇಕಿದ್ದರೆ ಆ ಸ್ಥಳವನ್ನು ಖಾಲಿ ಮಾಡಿಕೊಳ್ಳಬಹುದು. ಇಂತಹ ಸಮಯದಲ್ಲಿ ಮೇಲಿನ ಪರಮಾತ್ಮನ ಕೃಪೆ ಇರುವುದಿಲ್ಲ ಮತ್ತು ವಿಪತ್ತುಗಳು ನಿಲ್ಲುವುದಿಲ್ಲ. ಮೃತಪಟ್ಟವರೊಂದಿಗೆ ನಮ್ಮ ಸಹಾನುಭೂತಿ ಇದೆ; ಆದರೆ ಅಧಿಕಾರದಲ್ಲಿರುವವರು ಅರ್ಥಮಾಡಿಕೊಳ್ಳಬೇಕು, ಅದು ದೇವಸ್ಥಾನ, ಮಸೀದಿ, ಗುರುದ್ವಾರ, ಚರ್ಚ್ ಯಾವುದೇ ಇರಲಿ, ಅವುಗಳಿಗೆ ಅವಮಾನವಾಗಬಾರದು. ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ