ಒರ್ವ ಪತ್ರಕರ್ತ ಹಮಾಸ್ ಭಯೋತ್ಪಾದಕ ಕೇಂದ್ರದ ಮುಖ್ಯಸ್ಥ ಎಂದು ಇಸ್ರೇಲ್ನ ಅನುಮಾನ

ಜೆರುಸಲೇಮ್ (ಇಸ್ರೇಲ್) – ಇಸ್ರೇಲ್ ಗಾಝಾ ನಗರದಲ್ಲಿ ನಡೆಸಿದ ವಾಯುದಾಳಿಯಲ್ಲಿ ‘ಅಲ್-ಜಝೀರಾ ಅರೇಬಿಕ್’ ವರದಿಗಾರ ಅನಸ್ ಅಲ್ ಶರೀಫ್ ಸೇರಿದಂತೆ ಒಟ್ಟು 5 ಪತ್ರಕರ್ತರು ಮೃತಪಟ್ಟಿದ್ದಾರೆ. ಗಾಝಾ ನಗರದ ಅಲ್-ಶಿರೀಫ ಆಸ್ಪತ್ರೆಯ ಮುಖ್ಯ ಪ್ರವೇಶದ್ವಾರದ ಬಳಿ ಈ ದಾಳಿ ನಡೆದಿದೆ. ಈ ದಾಳಿಯಲ್ಲಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.
ಅನಸ್ ಅಲ್ ಶರೀಫ್ ಹಮಾಸ್ ಭಯೋತ್ಪಾದಕ ಕೇಂದ್ರದ ಮುಖ್ಯಸ್ಥನಾಗಿದ್ದನು. ಇಸ್ರೇಲಿ ನಾಗರಿಕರು ಮತ್ತು ಸೈನಿಕರ ವಿರುದ್ಧ ರಾಕೆಟ್ ದಾಳಿಗಳನ್ನು ನಡೆಸುವಲ್ಲಿ ಅವನ ಕೈವಾಡವಿತ್ತು ಎಂದು ಇಸ್ರೇಲಿ ಸೇನೆ ಆರೋಪಿಸಿದೆ. ಇಸ್ರೇಲ್ ದಾಳಿಯಲ್ಲಿ ಸಾಯುವ ಮೊದಲು ಅನಸ್ ಅಲ್ ಶರೀಫ್ ‘ಎಕ್ಸ್’ನಲ್ಲಿ ಒಂದು ವೀಡಿಯೊವನ್ನು ಪ್ರಸಾರ ಮಾಡಿದ್ದನು. ಅದರಲ್ಲಿ ಗಾಝಾ ನಗರದ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ಹೆಚ್ಚುತ್ತಿರುವ ಬಾಂಬ್ ದಾಳಿಗಳ ಬಗ್ಗೆ ಮಾಹಿತಿ ನೀಡಿದ್ದನು.
ಅಕ್ಟೋಬರ್ 2023 ರಲ್ಲಿ ಗಾಝಾದಲ್ಲಿ ಸಂಘರ್ಷ ಆರಂಭವಾದಾಗಿನಿಂದ, ಇಸ್ರೇಲ್ ಹಮಾಸ್ ಜೊತೆಗಿನ ಸಂಬಂಧದ ಬಗ್ಗೆ ಪ್ಯಾಲೆಸ್ಟೀನಿಯನ್ ಪತ್ರಕರ್ತರ ಮೇಲೆ ಹಲವು ಬಾರಿ ಆರೋಪ ಮಾಡಿದೆ.
ಸಂಪಾದಕೀಯ ನಿಲುವುಜಿಹಾದಿ ಭಯೋತ್ಪಾದಕರನ್ನು ಬೆಂಬಲಿಸುವ ಕತಾರ್ನ ಜಾಗತಿಕ ಸುದ್ದಿ ವಾಹಿನಿ ‘ಅಲ್-ಜಝೀರಾ’ದ ಕುರಿತು ಇಸ್ರೇಲ್ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಯಾರಾದರೂ ಹೇಳಿದರೆ ಅದು ತಪ್ಪಾಗಲಾರದು ! |
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis