|

ವಾಷಿಂಗ್ಟನ (ಅಮೆರಿಕಾ) – ಅಮೆರಿಕಾ ಪ್ರಾಯೋಜಿತ ಖಲಿಸ್ತಾನಿ ಭಯೋತ್ಪಾದಕ ಮತ್ತು ‘ಸಿಖ್ ಫಾರ್ ಜಸ್ಟಿಸ್’ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ ಸಿಂಗ್ ಪನ್ನು, ಆಗಸ್ಟ್ 15 ರಂದು ದೆಹಲಿಗೆ ಹೋಗುವ ರೈಲುಗಳನ್ನು ಗುರಿಯಾಗಿಸಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಆದ್ದರಿಂದ, ಈ ದಿನ ದೆಹಲಿಗೆ ಹೋಗುವ ರೈಲುಗಳಲ್ಲಿ ಪ್ರಯಾಣಿಸದಂತೆ ಅವನು ಎಚ್ಚರಿಕೆ ನೀಡಿದ್ದಾನೆ. ಅಲ್ಲದೆ, ಪಂಜಾಬಿನ ಜನರಿಗೆ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಅವರ ಫರೀದಕೋಟನಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಿಂದ ದೂರವಿರುವಂತೆ ಕರೆ ನೀಡಿದ್ದಾನೆ. ಪನ್ನುವಿನ ಸಹಚರ ಭಯೋತ್ಪಾದಕ ಜಶ್ನಪ್ರೀತ ಸಿಂಗನನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಗಾಯಗೊಳಿಸಿದ್ದರಿಂದ ಪನ್ನು ಈ ಬೆದರಿಕೆ ಹಾಕಿದ್ದಾನೆ. ಅವನು ಬೆದರಿಕೆಯ ಒಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದಾನೆ.
ಸಂಪಾದಕೀಯ ನಿಲುವುಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಆಗಾಗ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಮತ್ತು ಈಗ ಸ್ವಾತಂತ್ರ್ಯ ದಿನದಂದು ಇಂತಹ ಕೃತ್ಯ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುವಿನ ವಿರುದ್ಧ ಅಮೆರಿಕಾ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಅಮೆರಿಕಾ ಅವನಿಗೆ ಬೆಂಬಲ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ