ಭಕ್ತರಿಂದ ಅಸಮಾಧಾನ

ಧಾರಾಶಿವ – ಜಿಲ್ಲೆಯ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಇಲಿಗಳು ಓಡಾಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೇವಸ್ಥಾನವನ್ನು ಮುಚ್ಚಿದ ನಂತರ ಶ್ರೀ ತುಳಜಾಭವಾನಿ ದೇವಿಯ ಗರ್ಭಗುಡಿಯಲ್ಲಿ ಇಲಿಗಳು ಓಡಾಡುವುದು ದೇವಸ್ಥಾನದ ಆನ್ಲೈನ್ ದರ್ಶನದ ಸಮಯದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ.
ಗುಜರಾತ್ನ ಭಾವನಗರದ ಭಕ್ತರಾದ ಶ್ರೀ. ಹಿತೇಶ ಭಾಯಿ ಜಾನಿ ಅವರು ಈ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಲಿಗಳ ಹಾವಳಿಯನ್ನು ತಕ್ಷಣವೇ ನಿಯಂತ್ರಿಸುವಂತೆ ಒತ್ತಾಯಿಸಿದ್ದಾರೆ. ರಾತ್ರಿಯಿಡೀ ಗರ್ಭಗುಡಿಯಲ್ಲಿ ಓಡಾಡುವ ಇಲಿಗಳಿಂದ ಶ್ರೀ ತುಳಜಾಭವಾನಿ ದೇವಿಯ ಪುರಾತನ ಆಭರಣಗಳಿಗೆ ಹಾನಿಯಾಗುವ ಭೀತಿ ಇದೆ ಎಂದು ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಭಕ್ತರ ಪ್ರಕಾರ, ದೇವಸ್ಥಾನದ ಆಡಳಿತವು ಈ ವಿಷಯದಲ್ಲಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಗರ್ಭಗುಡಿಯ ಶುಚಿತ್ವ ಮತ್ತು ಸುರಕ್ಷತೆಯ ಬಗ್ಗೆ ಗಮನಹರಿಸಬೇಕು. ಈ ವಿಷಯದ ಬಗ್ಗೆ ದೇವಿಯ ಅರ್ಚಕರು ದೇವಸ್ಥಾನದ ಆಡಳಿತಕ್ಕೆ ಪತ್ರವನ್ನೂ ಬರೆದಿದ್ದರು; ಆದರೆ, ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪರಿಹಾರವನ್ನು ಕಂಡುಹಿಡಿದಿಲ್ಲ.
ಸಂಪಾದಕೀಯ ನಿಲುವುದೇವಸ್ಥಾನದ ಸರಕಾರೀಕರಣದ ದುಷ್ಪರಿಣಾಮಗಳು! ದೇವಸ್ಥಾನದ ಸಣ್ಣಪುಟ್ಟ ಸಮಸ್ಯೆಗಳನ್ನೂ ದೇವಸ್ಥಾನದ ಆಡಳಿತಕ್ಕೆ ಪರಿಹರಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!