ಸ್ಪೀಕರ್ ಅವರಿಂದ 3 ಸದಸ್ಯರ ಸಮಿತಿ ಸ್ಥಾಪನೆ

ನವದೆಹಲಿ – ಅಲಹಾಬಾದ್ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ವಿರುದ್ಧದ ದೋಷಾರೋಪಣೆಯ ಪ್ರಸ್ತಾವವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ತನಿಖೆಗಾಗಿ 3 ಸದಸ್ಯರ ಸಮಿತಿಯನ್ನು ಘೋಷಿಸಿದ್ದಾರೆ. ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಉಚ್ಚ ನ್ಯಾಯಾಲಯದ ತಲಾ ಒಬ್ಬ ನ್ಯಾಯಾಧೀಶರು ಮತ್ತು ಒಬ್ಬ ಕಾನೂನು ತಜ್ಞರು ಇರುತ್ತಾರೆ. ತನಿಖಾ ಸಮಿತಿಯ ವರದಿ ಬರುವವರೆಗೂ ದೋಷಾರೋಪಣೆಯ ಪ್ರಸ್ತಾವ ಬಾಕಿ ಇರುತ್ತದೆ. ಈ ಪ್ರಸ್ತಾವದಲ್ಲಿ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಲಾಗಿದೆ.
ಈ ವರ್ಷ ಮಾರ್ಚ್ 14 ರಂದು ನ್ಯಾಯಮೂರ್ತಿ ವರ್ಮಾ ಅವರ ಮನೆಯ ಅತಿಥಿಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯನ್ನು ನಂದಿಸಿದ ನಂತರ ಅಗ್ನಿಶಾಮಕ ದಳದವರಿಗೆ ಸುಟ್ಟುಹೋದ 500 ರೂಪಾಯಿ ನೋಟುಗಳು ಗೋಣಿಚೀಲಗಳಲ್ಲಿ ತುಂಬಿರುವುದು ಕಂಡುಬಂದಿತ್ತು. ಈ ಘಟನೆಯ ವಿಡಿಯೋ ವೈರಲ್ ಆದ ನಂತರ ತನಿಖೆಗೆ ಒತ್ತಾಯಿಸಲಾಗಿತ್ತು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !