
ಶಿಮ್ಲಾ – ಹಿಮಾಚಲ ಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ ಮತ್ತು ರಾಜ್ಯದ ಕೋಟಖಾಯಿ ಬೆಟ್ಟಗಳಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಕಾಲುವೆಗಳಲ್ಲಿ ಮಣ್ಣಿನ ರಾಶಿ ಶೇಖರಣೆ ಆಗಿದೆ. ಈ ಮೇಘಸ್ಫೋಟದಿಂದಾಗಿ, ತರಾಯಿಯಲ್ಲಿ ನಿರ್ಮಿಸಲಾದ ಪೆಟ್ರೋಲ್ ಪಂಪ್ ಮತ್ತು 6ಕ್ಕೂ ಹೆಚ್ಚು ವಾಹನಗಳು ಮಣ್ಣಿನಲ್ಲಿ ಹೂತುಹೋಗಿವೆ. ಕುಲ್ಲು ಮತ್ತು ಶಿಮ್ಲಾದಲ್ಲಿಯೂ ಮೇಘಸ್ಫೋಟ ಸಂಭವಿಸಿದ್ದು, ನದಿ ಮತ್ತು ಹಳ್ಳಗಳು ಉಕ್ಕಿ ಹರಿಯುತ್ತಿವೆ. ‘ಹಿಮಾಚಲ ವಿಪತ್ತು ನಿರ್ವಹಣಾ ಪ್ರಾಧಿಕಾರ’ದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ರಾಜ್ಯದಲ್ಲಿ 323 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಹಠಾತ್ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದ್ದ 4 ಜನರನ್ನು ಸೇನೆಯು ರಕ್ಷಿಸಿದೆ.
ಉತ್ತರಪ್ರದೇಶದ 11 ಜಿಲ್ಲೆಗಳಲ್ಲಿ ಪ್ರವಾಹ: ಶಾಲೆ-ಕಾಲೇಜು ಬಂದ್!
ಉತ್ತರಪ್ರದೇಶದ 11 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಹವಾಮಾನ ಇಲಾಖೆಯು ರಾಜ್ಯದ 24 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯನ್ನು ಮುನ್ಸೂಚಿಸಿದೆ. ಆಗಸ್ಟ್ 13 ರ ರಾತ್ರಿ ಲಕ್ಷ್ಮಣಪುರಿಯಲ್ಲಿ ಭಾರೀ ಮಳೆಯಾಗಿದೆ. ಲಕ್ಷ್ಮಣಪುರಿ ಸೇರಿದಂತೆ ಪ್ರವಾಹ ಪೀಡಿತ ಇತರ ಜಿಲ್ಲೆಗಳಲ್ಲಿ ಎಲ್ಲಾ ಸರಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ