
ಮುಂಬಯಿ – ಹೆಸರಾಂತ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರ ಮುಂಬರುವ ಸಿನಿಮಾ ‘ದಿ ಬಂಗಾಲ ಫೈಲ್ಸ್’ ಚರ್ಚೆಯಲ್ಲಿದೆ. ಸಿನಿಮಾದ ಟೀಸರ್(ಚಲನಚಿತ್ರದ ಸಂಕ್ಷಿಪ್ತ ಭಾಗ) ಬಿಡುಗಡೆಯಾದ ನಂತರ, ಆಗಸ್ಟ್ 16 ರಂದು ಕೋಲಕಾತಾದಲ್ಲಿ ಟ್ರೈಲರ್ ಬಿಡುಗಡೆಯಾಗಲಿದೆ. ಇದಕ್ಕಾಗಿ ನಗರದಲ್ಲಿ ದೊಡ್ಡ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೂ ಮುನ್ನ ಅಗ್ನಿಹೋತ್ರಿ ಅವರು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಸಾಧ್ಯತೆ ಇದೆ. ಆದರೆ, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರಕಾರವು ಈ ಸಿನಿಮಾವನ್ನು ಬಂಗಾಳದಲ್ಲಿ ಪ್ರದರ್ಶಿಸಲು ಅವಕಾಶ ನೀಡುವುದಿಲ್ಲ ಎಂಬ ನಿಲುವನ್ನು ವ್ಯಕ್ತಪಡಿಸಿದೆ.

‘ದಿ ಬಂಗಾಲ ಫೈಲ್ಸ್’ ಸಿನಿಮಾವು 1946 ರಲ್ಲಿ ಅಂದಿನ ಕೋಲಕಾತಾದಲ್ಲಿ ನಡೆದ ಗಲಭೆಗಳ ಕುರಿತಾಗಿದೆ. ಸಿನಿಮಾದ ಟೀಸರ್ನಲ್ಲಿ ‘ಬಂಗಾಳವು ಮತ್ತೊಂದು ಕಾಶ್ಮೀರವಾಗಿ ಬದಲಾಗುತ್ತಿದೆ’ ಎಂಬ ಹೇಳಿಕೆ, ಹಾಗೂ ಅದರಲ್ಲಿ ಸುಡುತ್ತಿರುವ ಶ್ರೀ ದುರ್ಗಾದೇವಿಯ ವಿಗ್ರಹವನ್ನು ತೋರಿಸಿರುವುದರಿಂದ ಜನರಲ್ಲಿ ಸಿನಿಮಾದ ಬಗ್ಗೆ ಕುತೂಹಲ ಮೂಡಿದೆ. ಅಭಿಷೇಕ್ ಅಗರ್ವಾಲ್ ಮತ್ತು ಪಲ್ಲವಿ ಜೋಶಿ ಈ ಸಿನಿಮಾದ ನಿರ್ಮಾಪಕರು. ನಟರಾದ ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ಅನುಪಮ್ ಖೇರ್ ಮತ್ತು ದರ್ಶನ್ ಕುಮಾರ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 5 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ