
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ರಂಗಪುರ ಜಿಲ್ಲೆಯ ತಾರಾಗಂಜ ಉಪಜಿಲ್ಲೆಯ ಬುರಿರಹಾಟ್ ಹೈಸ್ಕೂಲ್ ಆವರಣದಲ್ಲಿ ಕಳ್ಳತನದ ಸಂಶಯದ ಮೇಲೆ 2 ಹಿಂದೂಗಳಿಗೆ ಥಳಿಸಿ ಹತ್ಯೆ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಮೃತಪಟ್ಟವರು ಘನಿರಾಮಪುರದ ರೂಪಲಾಲ್ ದಾಸ್ (40 ವರ್ಷ) ಮತ್ತು ಮಿಠಾಪುಕೂರ್ ಉಪಜಿಲ್ಲೆಯ ಪ್ರದೀಪ ದಾಸ್ (35 ವರ್ಷ) ಎಂದು ಗುರುತಿಸಲಾಗಿದೆ. ಅವರಿಬ್ಬರೂ ಒಂದೇ ಕುಟುಂಬಕ್ಕೆ ಸೇರಿದವರು. ಈ ಪ್ರಕರಣದಲ್ಲಿ ಪೊಲೀಸರು ಇಬಾದತ್ ಹುಸೇನ್, ಅಖ್ತರುಲ್ ಇಸ್ಲಾಂ, ರಫೀಕುಲ್ ಇಸ್ಲಾಂ ಮತ್ತು ಮಿಜಾನೂರ್ ರೆಹಮಾನ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಪೊಲೀಸರು ಜನಸಮೂಹ ಕಂಡು ಓಡಿಹೋದರು!
‘ಢಾಕಾ ಟ್ರಿಬ್ಯೂನ್’ ವರದಿಯ ಪ್ರಕಾರ, ಪೊಲೀಸರು ಸ್ಥಳಕ್ಕೆ ತಲುಪಿದ್ದರು, ಆದರೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಇಷ್ಟೆ ಅಲ್ಲ, ಅವರು ಭಯಭೀತರಾಗಿ ಅಲ್ಲಿಂದ ಓಡಿಹೋಗಿದ್ದಾರೆ. ನಂತರ ಸೇನಾ ವಾಹನಗಳು ಸ್ಥಳಕ್ಕೆ ಬಂದಾಗ, ರೂಪಲಾಲ್ ದಾಸ್ ಆಗಲೇ ಮೃತಪಟ್ಟಿದ್ದರು ಮತ್ತು ಥಳಿಸಿದವರಲ್ಲಿ ಹೆಚ್ಚಿನವರು ಪರಾರಿಯಾಗಿದ್ದರು.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಹತ್ಯೆ ಮಾಡಲು ಮತಾಂಧರು ಅವರ ಮೇಲೆ ಯಾವುದೇ ಸುಳ್ಳು ಕಾರಣಗಳನ್ನು ಹೇಳಿ ದಾಳಿ ಮಾಡುತ್ತಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ! |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers