ಮುಖ್ಯೋಪಾಧ್ಯಾಯ ಜಹೆರುಲ್ ಇಸ್ಲಾಮ್ ಅಮಾನತು

ಬೊಂಗಾಯಿಗಾಂವ್ (ಅಸ್ಸಾಂ) – ಬೊಂಗಾಯಿಗಾಂವ್ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ಹಿಂದೂ ಮಕ್ಕಳಿಂದ ಕುರಾನ್ ಪಠಣ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವೈರಲ್ ಆದ ನಂತರ ಶಾಲೆಯ ಮುಖ್ಯೋಪಾಧ್ಯಾಯ ಜಹೆರುಲ್ ಇಸ್ಲಾಮ್ ಮತ್ತು ಶಾಲೆಯ ಮತ್ತೊಬ್ಬ ಸಿಬ್ಬಂದಿ ನಿರ್ಮಲ್ ಕುಮಾರ್ ಚೌಧರಿ ಅವರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ‘ಎಕ್ಸ್’ ಮೂಲಕ ಸ್ವತಃ ಮಾಹಿತಿ ನೀಡಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ. ನಮ್ಮ ಶಾಲೆಗಳಲ್ಲಿ ಯಾವುದೇ ರೀತಿಯ ಕಟ್ಟರತೆಯನ್ನು ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
The headmaster of the school had been placed under suspension. We will take all steps to prevent any kind of radicalisation in our schools. https://t.co/gfQcufPk8x
— Himanta Biswa Sarma (@himantabiswa) August 18, 2025
ವಿಡಿಯೋದಲ್ಲಿ ವಿದ್ಯಾರ್ಥಿಗಳು ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಕುರಾನ್ ಪಠಣ ಮಾಡುತ್ತಿರುವುದು ಕಾಣಿಸುತ್ತಿತ್ತು. ಸ್ವಾತಂತ್ರ್ಯ ದಿನಾಚರಣೆಯಂದು ಈ ವಿಡಿಯೋ ವೈರಲ್ ಆದ ನಂತರ, ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ತನಿಖೆಯಿಂದ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಗೀತೆಯ ಬದಲು ಕುರಾನ್ ಪಠಣ ಮಾಡಿರುವುದು ಕಂಡುಬಂದಿದೆ; ಆದರೆ, ನಂತರ ಇದು ಆಗಸ್ಟ್ 8 ರ ಘಟನೆ ಎಂದು ತಿಳಿದುಬಂದಿದೆ. ಯಾವುದೇ ಸರಕಾರಿ ಶಾಲೆಯ ಪ್ರಾರ್ಥನಾ ಸಭೆಯಲ್ಲಿ ಧಾರ್ಮಿಕ ಗ್ರಂಥಗಳ ಪಠಣಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ ಪಲ್ಲವಿ ಮೇಧಿ ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹವರನ್ನು ಬಂಧಿಸಿ ಜೈಲಿಗೆ ಹಾಕಬೇಕು, ಆಗ ಮಾತ್ರ ಇತರಿಗೆ ಭಯ ಹುಟ್ಟುವುದು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!