
ಬೆಂಗಳೂರು – ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣ `ಎಕ್ಸ್’ ಮೂಲಕ ಸಂತಸ ವ್ತಕ್ತಪಡಿಸಿದ್ದಾರೆ
`ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು,’ ಎಂದೂ ಹೇಳಿದ್ದಾರೆ.
ರಾಜ್ಯದ ಪ್ರಗತಿಯ ಸಂಕೇತ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಈ ಮಹತ್ತರ ಸಾಧನೆಗಾಗಿ ಶ್ರಮಿಸಿದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ಅಧಿಕಾರಿಗಳು, ಸಿಬ್ಬಂದಿ ಹಾಗೂ ಯೋಜನೆಯ ಲಾಭ ಪಡೆದ ಪ್ರತಿಯೊಬ್ಬ ಮಹಿಳಾ ಪ್ರಯಾಣಿಕರಿಗೂ ಧನ್ಯವಾದಗಳು. ‘ಶಕ್ತಿ’ ಕೇವಲ ಯೋಜನೆಯಲ್ಲ, ಇದು ಮಹಿಳೆಯರ ಸಬಲೀಕರಣ ಮತ್ತು ರಾಜ್ಯದ ಪ್ರಗತಿಯ ಸಂಕೇತವಾಗಿದೆ ಎಂದು ಉಪಮುಖ್ಯಮಂತ್ರ ಡಿ.ಕೆ.ಶಿವಕುಮಾರ ಇವರು ಸಾಮಾಜಿಕ ಜಾಲತಾಣ `ಎಕ್ಸ್’ ಮೂಲಕ ಈ ಶಕ್ತಿ ಯೋಜನೆ ಬಗ್ಗೆ ಶ್ಲಾಘಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ