ರಾಜ್ಯಸಭೆಯಲ್ಲಿ ‘ಆನ್‌ಲೈನ್ ಮನಿ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ

ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ಯಶಸ್ಸು!

ನವದೆಹಲಿ – ಲೋಕಸಭೆಯಲ್ಲಿ ಅಂಗೀಕಾರವಾದ ನಂತರ, ಆಗಸ್ಟ್ 21 ರಂದು ರಾಜ್ಯಸಭೆಯಲ್ಲಿಯೂ ಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಅನುಮೋದನೆ ದೊರೆತಿದೆ. ಇದರಿಂದ, ರಾಷ್ಟ್ರಪತಿಯವರ ಅಂಕಿತದ ನಂತರ ಇದು ಕಾನೂನಾಗಿ ಜಾರಿಗೆ ಬರಲಿದೆ.

ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸುವಾಗ, ಕೇಂದ್ರ ಸಚಿವ ಶ್ರೀ. ಅಶ್ವಿನಿ ವೈಷ್ಣವ್ ಅವರು, ಈ ಗೇಮಿಂಗ್ ವ್ಯಸನದಿಂದಾಗಿ ಅನೇಕರು ಜೀವನಪರ್ಯಂತದ ಗಳಿಕೆಯನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂದು ತಿಳಿಸಿದರು. ದೇಶದ 45 ಕೋಟಿ ಜನರು ಈ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡಿದ್ದು, 20 ಸಾವಿರ ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನೂ ವೈಷ್ಣವ್ ಅವರು ನೀಡಿದರು.

ಈ ಕಾನೂನಿನ ಮೂಲಕ, ಈಗ ಸರಕಾರವು ಈ ಗೇಮಿಂಗ್ ಅನ್ನು ನಿಯಂತ್ರಿಸಬಹುದಾಗಿದೆ. ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ವು ಇಂತಹ ಕಾನೂನು ಜಾರಿಗೆ ತರಲು ನಿರಂತರವಾಗಿ ಸರಕಾರಕ್ಕೆ ಮನವಿ ಸಲ್ಲಿಸುತ್ತಿತ್ತು.