ಗಡಿ ಭದ್ರತಾ ಪಡೆಯಿಂದ ಕಾರ್ಯಾಚರಣೆ

ಕರ್ಣಾವತಿ (ಗುಜರಾತ) – ಗುಜರಾತ್ ನ ಕಚ್ ಬಳಿ ಸಮುದ್ರದಲ್ಲಿ ಗಡಿ ಭದ್ರತಾ ಪಡೆ 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದೆ. ಅವರ ಬಳಿಯಿಂದ ಒಂದು ಯಾಂತ್ರಿಕೃತ ದೋಣಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಆಗಸ್ಟ್ 24ರಂದು ಬೆಳಗ್ಗೆ 9 ಗಂಟೆಗೆ ನಡೆಸಲಾಯಿತು. ಬಂಧಿತರೆಲ್ಲರೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜತಿ ಗ್ರಾಮದವರು. ಈ ಜನರು ಭಾರತೀಯ ಗಡಿಯೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದರು.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಗುಪ್ತಚರ ಮೂಲಗಳಿಂದ ಯೋಧರಿಗೆ ಈ ಸಂಶಯಾಸ್ಪದ ದೋಣಿಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರ ಆಧಾರದ ಮೇಲೆ, ಅವರು ಭಾರತ-ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಕೋರಿ ಹಿನ್ನೀರಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಈ ಮೀನುಗಾರರಿಂದ 60 ಕೆಜಿ ಮೀನು ಹಾಗೂ ದೊಡ್ಡ ಪ್ರಮಾಣದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪಾಕಿಸ್ತಾನಿ ಮೀನುಗಾರರು ಭಾರತೀಯ ಸಮುದ್ರದಲ್ಲಿ ದೀರ್ಘಕಾಲ ಉಳಿಯಲು ಸಿದ್ಧರಾಗಿ ಬಂದಿದ್ದರು ಎಂಬುದನ್ನು ತೋರಿಸುತ್ತದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!