ಗಡಿ ಭದ್ರತಾ ಪಡೆಯಿಂದ ಕಾರ್ಯಾಚರಣೆ

ಕರ್ಣಾವತಿ (ಗುಜರಾತ) – ಗುಜರಾತ್ ನ ಕಚ್ ಬಳಿ ಸಮುದ್ರದಲ್ಲಿ ಗಡಿ ಭದ್ರತಾ ಪಡೆ 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದೆ. ಅವರ ಬಳಿಯಿಂದ ಒಂದು ಯಾಂತ್ರಿಕೃತ ದೋಣಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಆಗಸ್ಟ್ 24ರಂದು ಬೆಳಗ್ಗೆ 9 ಗಂಟೆಗೆ ನಡೆಸಲಾಯಿತು. ಬಂಧಿತರೆಲ್ಲರೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜತಿ ಗ್ರಾಮದವರು. ಈ ಜನರು ಭಾರತೀಯ ಗಡಿಯೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದರು.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಗುಪ್ತಚರ ಮೂಲಗಳಿಂದ ಯೋಧರಿಗೆ ಈ ಸಂಶಯಾಸ್ಪದ ದೋಣಿಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರ ಆಧಾರದ ಮೇಲೆ, ಅವರು ಭಾರತ-ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಕೋರಿ ಹಿನ್ನೀರಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಈ ಮೀನುಗಾರರಿಂದ 60 ಕೆಜಿ ಮೀನು ಹಾಗೂ ದೊಡ್ಡ ಪ್ರಮಾಣದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪಾಕಿಸ್ತಾನಿ ಮೀನುಗಾರರು ಭಾರತೀಯ ಸಮುದ್ರದಲ್ಲಿ ದೀರ್ಘಕಾಲ ಉಳಿಯಲು ಸಿದ್ಧರಾಗಿ ಬಂದಿದ್ದರು ಎಂಬುದನ್ನು ತೋರಿಸುತ್ತದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)