|

ತಿರುವನಂತಪುರಂ (ಕೇರಳ) – ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಉದಯಕುಮಾರ್ ವಿ. ಅವರನ್ನು ಕೊಲ್ಲಂನ ಮೋಟಾರು ಅಪಘಾತಗಳ ಹಕ್ಕುಗಳ ನ್ಯಾಯಮಂಡಳಿಗೆ ಕೇರಳ ಉಚ್ಚ ನ್ಯಾಯಾಲಯ ವರ್ಗಾಯಿಸಿದೆ. ಅವರ ಮೇಲೆ ಸಮಾಲೋಚನೆಯ (ಕೌನ್ಸಿಲಿಂಗ್) ಸಮಯದಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುವುದು ಮತ್ತು ಅಶ್ಲೀಲ ಟಿಪ್ಪಣಿಗಳನ್ನು ಮಾಡಿರುವ ಆರೋಪವಿದೆ.
ಈ ಕುರಿತು ಸಂತ್ರಸ್ತ ಮಹಿಳೆಯು ಕೊಲ್ಲಂನ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಲಿಖಿತ ದೂರು ನೀಡಿದ್ದರು. ಈ ವಿಷಯದ ಗಂಭೀರತೆಯನ್ನು ಪರಿಗಣಿಸಿ, ಉಚ್ಚ ನ್ಯಾಯಾಲಯವು ಉದಯಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿದೆ. ಕೇರಳ ಉಚ್ಚ ನ್ಯಾಯಾಲಯದ ಆಡಳಿತ ಸಮಿತಿಯು ಈ ತನಿಖೆಯ ಜವಾಬ್ದಾರಿಯನ್ನು ಜಿಲ್ಲಾ ನ್ಯಾಯಾಂಗದ ನೋಂದಣಿ ಅಧಿಕಾರಿಗೆ ವಹಿಸಿದೆ. ಅವರ ವರದಿಯನ್ನು ಸಮಿತಿಗೆ ಸಲ್ಲಿಸಲಾಗಿದ್ದು, ಮುಂದಿನ ವಾರ ಅದರ ಮೇಲೆ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!