ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರಿಂದ ಬಿಗಿ ಬಂದೋಬಸ್ತ್

ಅಹಮದ್ನಗರ – ಜಿಲ್ಲೆಯ 3 ಸಾವಿರ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಂದ ‘ಶ್ರೀ’ ವಿಗ್ರಹದ ಪ್ರತಿಷ್ಠಾಪನೆ ಮತ್ತು 221 ಗ್ರಾಮಗಳಲ್ಲಿ ‘ಒಂದು ಗ್ರಾಮ ಒಂದು ಗಣಪತಿ’ ಉಪಕ್ರಮವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಗಣೇಶೋತ್ಸವದ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 500 ಮಂದಿ ಸಮಾಜ ವಿರೋಧಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ 3 ಸಾವಿರ ಪೊಲೀಸರ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮಾಧ್ಯಮಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ಪೊಲೀಸ್ ತಂಡವನ್ನು ಸಹ ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಮಹಾನಿರೀಕ್ಷಕ ದತ್ತಾತ್ರಯ ಕರಾಳೆ ಅವರು ಮಾಧ್ಯಮಗಳಿಗೆ ತಿಳಿಸಿದರು.
ದತ್ತಾತ್ರಯ ಅವರು ಈ ಬಗ್ಗೆ ಮಾತನಾಡಿ, “ಗಣೇಶೋತ್ಸವದ ಸಮಯದಲ್ಲಿ ಪೊಲೀಸರ ರಜೆಗಳನ್ನು ರದ್ದುಗೊಳಿಸಲಾಗಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ತಮ್ಮ ಮಂಟಪಗಳ ಸುತ್ತ-ಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಲಾಗಿದೆ ಮತ್ತು ಅವರು ಇದರ ಪಾಲನೆ ಮಾಡಿದ್ದಾರೆಯೇ ಎಂದು ಪರಿಶೀಲಿಸಲಾಗುವುದು. ನಾಗರಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಮಹಾನಗರಪಾಲಿಕೆ ಮತ್ತು ಮಹಾವಿತರಣ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಬಂಧಿತ ಸೂಚನೆಗಳನ್ನು ನೀಡಲಾಗಿದೆ. ಅಹಮದ್ನಗರದಲ್ಲಿ ಅಪೂರ್ಣಗೊಂಡ ರಸ್ತೆ ಕಾಮಗಾರಿಗಳ ಕುರಿತು ಕ್ರಮ ಕೈಗೊಳ್ಳುವಂತೆ ಮಹಾನಗರಪಾಲಿಕೆಗೆ ಸೂಚನೆ ನೀಡಲಾಗಿದೆ. ವಿದ್ಯುತ್ ತಂತಿಗಳ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಹಾವಿತರಣ ಅಧಿಕಾರಿಗಳಿಗೂ ಕೂಡ ಸೂಚನೆಗಳನ್ನು ನೀಡಲಾಗಿದೆ” ಎಂದು ವಿವರಿಸಿದರು.
ಸಂಪಾದಕೀಯ ನಿಲುವುಅಹಮದ್ನಗರ ಜಿಲ್ಲೆಯ ಗ್ರಾಮಗಳನ್ನು ಮಾದರಿಯಾಗಿಟ್ಟುಕೊಂಡು, ಎಲ್ಲ ಗಣೇಶೋತ್ಸವ ಮಂಡಳಿಗಳು ‘ಒಂದು ಗ್ರಾಮ ಒಂದು ಗಣಪತಿ’ ಉಪಕ್ರಮವನ್ನು ಜಾರಿಗೆ ತರಬೇಕು! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ