
ನವದೆಹಲಿ – ಹಿಂದೂ ಮಹಾಸಾಗರದಲ್ಲಿ ಭಾರತದ ಶಕ್ತಿ ಈಗ ಮತ್ತಷ್ಟು ಹೆಚ್ಚಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಶಾಖಪಟ್ಟಣಂ ನೌಕಾನೆಲೆಯಲ್ಲಿ ‘ಉದಯಗಿರಿ’ ಮತ್ತು ‘ಹಿಮಗಿರಿ’ ಎಂಬ ಅತ್ಯಾಧುನಿಕ ಯುದ್ಧನೌಕೆಗಳನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದರು. ರಕ್ಷಣಾ ಸಚಿವಾಲಯದ ಹೇಳಿಕೆಯ ಪ್ರಕಾರ, ಎರಡು ವಿಭಿನ್ನ ನೌಕಾ ನಿರ್ಮಾಣ ಕಂಪನಿಗಳಿಂದ ತಯಾರಿಸಲಾದ ಈ ಎರಡು ಪ್ರಮುಖ ಯುದ್ಧನೌಕೆಗಳನ್ನು ಒಂದೇ ಬಾರಿಗೆ ಕಾರ್ಯಾರಂಭ ಮಾಡಿದ್ದು ಇದೇ ಮೊದಲ ಬಾರಿಯಾಗಿದೆ. ಇದು ಭಾರತೀಯ ನೌಕಾಪಡೆಯ ಯುದ್ಧ ಸನ್ನದ್ಧತೆಯನ್ನು ಹೆಚ್ಚಿಸಿದ್ದು, ಈ ಯುದ್ಧನೌಕೆಗಳು ಸಂಪೂರ್ಣವಾಗಿ ದೇಶಿ ನಿರ್ಮಿತವಾಗಿವೆ. ಈ ಎರಡೂ ಯುದ್ಧನೌಕೆಗಳ ಮೂಲಕ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಕಡಲ ಹಿತಾಸಕ್ತಿಗಳನ್ನು ರಕ್ಷಿಸುವ ಸಾಮರ್ಥ್ಯ ಇನ್ನಷ್ಟು ಬಲಗೊಳ್ಳಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!