ಪಾಕಿಸ್ತಾನದ ಸಚಿವರಿಂದ ಭಾರತದ ಮೇಲೆ ಹುರುಳಿಲ್ಲದ ಆರೋಪ

ಇಸ್ಲಾಮಾಬಾದ – ಪಾಕಿಸ್ತಾನದ ಶಾಹಬಾಜ ಸರಕಾರದಲ್ಲಿ ಯೋಜನೆ ಮತ್ತು ಅಭಿವೃದ್ಧಿ ಸಚಿವ ಅಹ್ಸಾನ ಇಕ್ಬಾಲ್ ಅವರು ಪಾಕಿಸ್ತಾನದಲ್ಲಿನ ಪ್ರವಾಹಕ್ಕೆ ಭಾರತವನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ‘ಭಾರತವು ಪಾಕಿಸ್ತಾನದ ವಿರುದ್ಧ ನೀರನ್ನು ಶಸ್ತ್ರಾಸ್ತ್ರದಂತೆ ಬಳಸಿದೆ. ಭಾರತವು ತನ್ನ ಆಣೆಕಟ್ಟುಗಳಿಂದ ಹಠಾತ್ತಾಗಿ ಮತ್ತು ಉದ್ದೇಶಪೂರ್ವಕವಾಗಿ ನೀರನ್ನು ಬಿಟ್ಟಿದೆ’ ಎಂದು ಅವರು ಆರೋಪಿಸಿದ್ದಾರೆ. ಅವರು ಪಾಕಿಸ್ತಾನದ ಪಂಜಾಬನಲ್ಲಿನ ವಿನಾಶಕಾರಿ ಪ್ರವಾಹದ ಕುರಿತು ಮಾತನಾಡುತ್ತಿದ್ದರು. ರವಿ, ಸಟ್ಲೆಜ ಮತ್ತು ಚೀನಾಬ ನದಿಗಳ ನೀರಿನ ಮಟ್ಟ ಹೆಚ್ಚಾದ ಕಾರಣ, ಪಂಜಾಬನ ದೊಡ್ಡ ಪ್ರದೇಶವು ನೀರಿನಲ್ಲಿ ಮುಳುಗಿದೆ. ಪಾಕಿಸ್ತಾನಿ ವಿಜ್ಞಾನಿ ರವೂಫ್ ಕ್ಲಾಸ್ರಾ ಅವರು ಈ ಪ್ರವಾಹದ ಪರಿಣಾಮಗಳಿಗೆ ಪಾಕಿಸ್ತಾನದ ಶಾಹಬಾಜ ಷರೀಫ ಸರಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
1. ಸಚಿವ ಅಹ್ಸಾನ ಇಕ್ಬಾಲ ಅವರು ಭಾರತದ ಮೇಲೆ ಜಲ ಆಕ್ರಮಣದ ಆರೋಪ ಮಾಡಿದ್ದಾರೆ. ಅವರು ಭಾರತವು ನದಿಗಳಲ್ಲಿನ ನೀರನ್ನು ಸಂಗ್ರಹಿಸಿ, ಹಠಾತ್ತಾಗಿ ಬಿಡುತ್ತದೆ ಎಂದಿದ್ದಾರೆ.
2. ಇಕ್ಬಾಲ್ ಅವರು ಪ್ರವಾಹದ ಬಗ್ಗೆ ಭಾರತವು ಪೂರ್ವಸೂಚನೆ ನೀಡಿಲ್ಲ ಎಂದು ಆರೋಪಿಸಿದ್ದಾರೆ; ಆದರೆ ಇಕ್ಬಾಲ್ ಅವರ ಹೇಳಿಕೆ ಸುಳ್ಳು; ಏಕೆಂದರೆ ಭಾರತವು ಈ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು.
3. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು. ಈ ಒಪ್ಪಂದದ ಪ್ರಕಾರ ಕಾಶ್ಮೀರದಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಿದಾಗ ಅದರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಕಡ್ಡಾಯವಾಗಿತ್ತು.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿ ನಡೆಯುವ ಪ್ರತಿಯೊಂದು ವಿಷಯಕ್ಕೂ ಭಾರತವನ್ನು ಹೊಣೆಗಾರರನ್ನಾಗಿ ಮಾಡುವುದು ಪಾಕಿಸ್ತಾನದ ಹಳೆಯ ಚಾಳಿ. ಇಂತಹ ದೇಶವನ್ನು ಯಾರು ನಂಬುತ್ತಾರೆ? |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !