ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯ ಕಾರಣ ನೀಡಿದ ಜಿಲ್ಲಾಧಿಕಾರಿ!

ಬಳ್ಳಾರಿ – ಜಿಲ್ಲಾ ದಂಡಾಧಿಕಾರಿ ಮತ್ತು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಅವರು ಆದೇಶವನ್ನು ಹೊರಡಿಸಿ, ಈ ವರ್ಷ ಜಿಲ್ಲೆಯ ಗೋನಾಳ ಮತ್ತು ಹೊನ್ನಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಸ್ಥಾಪಿಸುವುದು, ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಜನರನ್ನು ಸೇರಿಸುವುದರ ಮೇಲೆ ನಿಷೇಧ ಹೇರಿದ್ದಾರೆ. ಈ ಗ್ರಾಮಗಳಲ್ಲಿ ಗಣೇಶೋತ್ಸವವನ್ನು ಆಚರಿಸಿದರೆ ಶಾಂತಿ ಮತ್ತು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಅಂತಹ ಸಂದೇಹವಿದ್ದರೆ, ಸಂಬಂಧಪಟ್ಟವರನ್ನು ಹುಡುಕಿ ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವ ಬದಲು ವರ್ಷಕ್ಕೆ ಒಮ್ಮೆ ಬರುವ ಹಿಂದೂಗಳ ಉತ್ಸವದ ಮೇಲೆ ನಿಷೇಧ ಹೇರುವ ಆಡಳಿತ ಕಾನೂನನ್ನು ಯಾವಾಗ ರಕ್ಷಿಸುತ್ತದೆ ಎಂಬ ಪ್ರಶ್ನೆ ಹಿಂದೂಗಳಿಗೆ ಬಂದರೆ ಆಶ್ಚರ್ಯಪಡಬೇಕಾಗಿಲ್ಲ! – ಸಂಪಾದಕರು)
ಸಂಪಾದಕೀಯ ನಿಲುವುಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದ್ದರೆ ಅದನ್ನು ರಕ್ಷಿಸುವುದು ಪೊಲೀಸರ ಕರ್ತವ್ಯವಾಗಿದೆ, ಹೀಗಿರುವಾಗ ಕಾರ್ಯಕ್ರಮಕ್ಕೆ ನಿಷೇಧ ಹೇರುವ ಜಿಲ್ಲಾಧಿಕಾರಿಗಳ ಆದೇಶವು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ದುಷ್ಕೃತ್ಯ ಮಾಡುವವರಿಗೆ ಬೆಂಬಲ ನೀಡುವುದಕ್ಕೆ ಅಥವಾ ಬೆಂಬಲ ನೀಡಿದಂತೆ ಆಗುವುದಿಲ್ಲವೇ? |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !