ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಭಾಜಪ ಕಾರ್ಯಕರ್ತರಲ್ಲಿ ಘರ್ಷಣೆ ! Bihar BJP Congress Fight

ರಾಹುಲ್ ಗಾಂಧಿ ಯಾತ್ರೆಯಲ್ಲಿ ಪ್ರಧಾನಿ ಮೋದಿಯವರನ್ನು ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣ

ಪಾಟ್ಲಿಪುತ್ರ (ಬಿಹಾರ) – ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ಅವರ ‘ವೋಟ್ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಘಟನೆಯನ್ನು ವಿರೋಧಿಸಿ ಭಾಜಪ ಕಾರ್ಯಕರ್ತರು ಪಾಟ್ಲಿಪುತ್ರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾಜಪ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಹೋಗಿ ರಾಹುಲ ಗಾಂಧಿ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಗೆ ಬಂದರು. ನಂತರ, ಕಾಂಗ್ರೆಸ್ ಮತ್ತು ಭಾಜಪ ಕಾರ್ಯಕರ್ತರ ನಡುವೆ ದೊಣ್ಣೆಯಿಂದ ದಾಳಿ ಹಾಗೂ ಕಲ್ಲು ತೂರಾಟ ನಡೆಯಿತು. ಈ ವೇಳೆ ವಾಹನಗಳು ಜಖಂಗೊಂಡಿರುವ ಬಗ್ಗೆಯೂ ವರದಿಯಾಗಿದೆ.

೧. ಈ ಘಟನೆಯ ನಂತರ, ಕಾಂಗ್ರೆಸ್ ಕಚೇರಿಯ ಬಳಿ ದೊಡ್ಡ ಪ್ರಮಾಣದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ. ಭಾಜಪ ಕಾರ್ಯಕರ್ತರು, ‘ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿ ಅವರ ಅವಮಾನವನ್ನು ನಾವು ಸಹಿಸುವುದಿಲ್ಲ’ ಎಂದು ಹೇಳಿದ್ದಾರೆ.

೨. ಪ್ರಧಾನಿ ಮೋದಿಯವರನ್ನು ನಿಂದಿಸಿದ ಮೊಹಮ್ಮದ್ ರಿಜ್ವಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಗಾಂಧಿ ಅವರ ಯಾತ್ರೆಯ ಹಿನ್ನೆಲೆಯಲ್ಲಿ ದರ್ಭಂಗಾದ ಬಿಥೌಲಿಯಲ್ಲಿ ಕಾಂಗ್ರೆಸ್ ನಾಯಕ ಮೊಹಮ್ಮದ್ ನೌಶಾದ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆಗ ರಿಜ್ವಿ ಈ ಅವಹೇಳನಕಾರಿ ಮಾತು ಆಡಿದ್ದನು.