ನಗರ ನಕ್ಸಲರ ಗುರಿ ಹಿಂದೂ ಧಾರ್ಮಿಕ ಸ್ಥಳಗಳು: ಬಿ.ಎಲ್. ಸಂತೋಷ್, ಭಾಜಪದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ

ನವ ದೆಹಲಿ – ಸಮಾಜದಲ್ಲಿ ಅಸ್ಥಿರತೆ ಸೃಷ್ಟಿಸಲು ಬಯಸುವ ಒಂದೇ ರೀತಿಯ ಸಿದ್ಧಾಂತ ಹೊಂದಿರುವ ನಗರ ನಕ್ಸಲರ ಮೊದಲ ಗುರಿ ಹಿಂದೂ ಧಾರ್ಮಿಕ ಸ್ಥಳಗಳು ಮತ್ತು ಶ್ರದ್ಧೆಗಳಾಗಿವೆ. ಈ ಪಟ್ಟಿಯಲ್ಲಿ ಚಾಮುಂಡಿ ಬೆಟ್ಟ ಮತ್ತು ದಸರಾ ಉತ್ಸವವನ್ನು ಸೇರಿಸಲಾಗಿದೆ ಎಂದು ಭಾಜಪದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

​”ದೇವಿ ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯಿಂದ ದೊಡ್ಡ ವಿವಾದ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಸಂತೋಷ್ ಈ ಪೋಸ್ಟ್ ಮಾಡಿದ್ದಾರೆ. ದಸರಾ ಮಹೋತ್ಸವದ ಉದ್ಘಾಟನೆಗೆ ಮುಸ್ಲಿಂ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ಹಿಂದೂಗಳಲ್ಲಿ ಆಕ್ರೋಶದ ವಾತಾವರಣವಿದೆ. ಭಾಜಪದ ಅನೇಕ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.