
ಚಂಡೀಗಢ (ಪಂಜಾಬ್) – ಪಂಜಾಬ್ ಪ್ರಸ್ತುತ ಧಾರಾಕಾರ ಮಳೆ ಮತ್ತು ಪ್ರವಾಹದಿಂದ ತತ್ತರಿಸುತ್ತಿದೆ. ರಾಜ್ಯ ಸರಕಾರವು ಇಡೀ ರಾಜ್ಯವನ್ನು ವಿಪತ್ತು ಪೀಡಿತ ಎಂದು ಘೋಷಿಸಿದೆ. ಧಾರಾಕಾರ ಮಳೆಯಿಂದಾಗಿ 23 ಜಿಲ್ಲೆಗಳಲ್ಲಿನ 1 ಸಾವಿರದ,400 ಗ್ರಾಮಗಳು ಪ್ರವಾಹವನ್ನು ಎದುರಿಸುತ್ತಿವೆ. ಇದುವರೆಗೆ 30 ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 3 ಜನರು ನಾಪತ್ತೆಯಾಗಿದ್ದಾರೆ. ಪಠಾಣ್ಕೋಟ್ನಲ್ಲಿ ಅತಿ ಹೆಚ್ಚು ಅಂದರೆ 6 ಜನರು ಮತ್ತು ಲೂಧಿಯಾನದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಅಮೃತಸರ, ಬರ್ನಾಲಾ, ಮಾನ್ಸಾ, ರೂಪನಗರ ಮತ್ತು ಹೋಶಿಯಾರ್ಪುರದಲ್ಲಿ ತಲಾ 3 ಜನರು ಮೃತಪಟ್ಟಿದ್ದಾರೆ. ಭಟಿಂಡಾ, ಗುರುದಾಸ್ಪುರ, ಪಟಿಯಾಲ, ಮೊಹಾಲಿ ಮತ್ತು ಸಂಗ್ರೂರ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ 324 ಗ್ರಾಮಗಳು, ಅಮೃತಸರದ 135, ಬರ್ನಾಲಾದ 134, ಹೋಶಿಯಾರ್ಪುರದ 119 ಮತ್ತು ಕಪುರ್ತಲಾದ 115 ಗ್ರಾಮಗಳು ನೀರಿನಲ್ಲಿ ಮುಳುಗಿವೆ. ಇತರ ಜಿಲ್ಲೆಗಳಲ್ಲಿ ತಲಾ 10 ರಿಂದ 12 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಪ್ರವಾಹದಿಂದಾಗಿ ಪೀಡಿತ ಜನರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಗುರುದಾಸ್ಪುರದಲ್ಲಿ ಮಾತ್ರ 1 ಲಕ್ಷ 45 ಸಾವಿರಕ್ಕೂ ಹೆಚ್ಚು ಮತ್ತು ಅಮೃತಸರದಲ್ಲಿ 1 ಲಕ್ಷ 17 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಫಿರೋಜ್ಪುರ, ಫಾಜಿಲ್ಕಾ ಮತ್ತು ಪಠಾಣ್ಕೋಟ್ ಜಿಲ್ಲೆಗಳಲ್ಲಿಯೂ ಸಹ ಸಾವಿರಾರು ಜನರು ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ. ಇದುವರೆಗೂ ಮೂರೂವರೆ ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದಾರೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ; ಆದರೆ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿರುವುದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ