
ಬೆಂಗಳೂರು – ಚಿನ್ನದ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ಗೆ 102 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಈ ಪ್ರಕರಣದಲ್ಲಿನ ಇತರ ಆರೋಪಿಗಳಾದ ಹೋಟೆಲ್ ಉದ್ಯಮಿ ತರುಣ್ ಕೊಂಡರಾಜುಗೆ 63 ಕೋಟಿ ರೂಪಾಯಿ, ಹಾಗೂ ಚಿನ್ನದ ವ್ಯಾಪಾರಿಗಳಾದ ಸಾಹಿಲ್ ಸಕಾರಿಯಾ ಜೈನ್ ಮತ್ತು ಭರತ ಕುಮಾರ್ ಜೈನ್ ಅವರಿಗೆ ತಲಾ 56 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಈ ನಾಲ್ವರು ಸದ್ಯ ಜೈಲಿನಲ್ಲಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯವು ಈ ದಂಡವನ್ನು ವಿಧಿಸಿದೆ.
1. ಮಾರ್ಚ್ 3 ರಂದು ದುಬೈನಿಂದ 14 ಕೆ.ಜಿ.ಗೂ ಹೆಚ್ಚು ಅಕ್ರಮ ಚಿನ್ನವನ್ನು ಭಾರತಕ್ಕೆ ಸಾಗಿಸುತ್ತಿದ್ದಾಗ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ ವಶಪಡಿಸಿಕೊಂಡ ಅಕ್ರಮ ಚಿನ್ನದ ಪ್ರಮಾಣದಲ್ಲಿ ಇದು ಅತಿ ಹೆಚ್ಚು ಪ್ರಮಾಣದ್ದಾಗಿತ್ತು. ಇದರಿಂದಾಗಿ ಕನ್ನಡ ಚಿತ್ರರಂಗ ಮತ್ತು ಉದ್ಯಮ ಸಮೂಹಗಳಿಗೆ ದೊಡ್ಡ ಆಘಾತ ಉಂಟಾಗಿತ್ತು. ಈ ಚಿನ್ನವನ್ನು ತರುವುದಕ್ಕಾಗಿ ಉಳಿದ ಮೂವರು ಆಕೆಗೆ ಸಹಾಯ ಮಾಡಿದ್ದರು.
2. ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಎಲ್ಲ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ದಂಡ ಪಾವತಿಸುವಂತೆ ಸೂಚಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!