ಕಾಂಗ್ರೆಸ್ ಕಾರ್ಯಕರ್ತನಿಂದ ಪ್ರಧಾನಿ ಮೋದಿಯವರ ದಿವಂಗತ ತಾಯಿಯವರನ್ನು ನಿಂದಿಸಿದ ಪ್ರಕರಣ

ಪಾಟಲೀಪುತ್ರ (ಬಿಹಾರ) – ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾಜಪ ನೇತೃತ್ವದ ‘ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ’ (ಎನ್ಡಿಎ) ಸೆಪ್ಟೆಂಬರ್ 4ರಂದು ‘ಬಿಹಾರ ಬಂದ್’ಗೆ ಕರೆ ನೀಡಿತ್ತು. ರಾಜ್ಯಾದ್ಯಂತ ಈ ಬಂದ್ ಪರಿಣಾಮ ಗೋಚರಿಸಿತು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಅವರು ‘ನಾನು ಕೂಡ ಒಬ್ಬ ತಾಯಿ’ ಎಂದು ಬರೆದಿದ್ದ ಫಲಕಗಳನ್ನು ಹಿಡಿದುಕೊಂಡಿದ್ದರು.
✊ Women joined in huge numbers during Bihar Bandh on July 4, holding placards – “I am also a mother.”
Protest was against a Congress worker abusing PM Modi’s late mother.
BJP demands apology from Rahul Gandhi & Tejashwi Yadav for staying silent on stage during the abuse.… pic.twitter.com/oZwXRXIuOX
— Sanatan Prabhat (@SanatanPrabhat) September 4, 2025
ಎನ್ಡಿಎಯಿಂದ ಪಾಟಲಿಪುತ್ರ, ಗಯಾ, ಮುಂಗೇರ್, ಸಮಸ್ತಿಪುರ, ಬೇಗುಸರಾಯ, ಛಪ್ರಾ, ಹಾಜಿಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾಜಪ ಮತ್ತು ಅದರ ಮಿತ್ರಪಕ್ಷಗಳ ಮಹಿಳಾ ನಾಯಕರು ದೊಡ್ಡ ಸಂಖ್ಯೆಯಲ್ಲಿ ರಸ್ತೆಗೆ ಇಳಿದಿದ್ದರು. ಇದರೊಂದಿಗೆ ಭಾಜಪ ಕಾರ್ಯಕರ್ತರು ‘ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ. ಆಗಸ್ಟ್ 27, 2025 ರಂದು ದರಭಂಗಾದಲ್ಲಿ ಆಯೋಜಿಸಲಾಗಿದ್ದ ಮತದಾರರ ಹಕ್ಕು ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಉಪಸ್ಥಿತರಿದ್ದ ವೇದಿಕೆಯಿಂದ ಒಬ್ಬ ಕಾರ್ಯಕರ್ತ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯನ್ನು ನಿಂದಿಸಿದ್ದರು. ಅಂದಿನಿಂದ ಭಾಜಪ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !