
ರಾಂಚಿ – ಜಾರ್ಖಂಡ್ನ ಪಲಾಮು ಜಿಲ್ಲೆಯ ಮಾನಾತು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 4 ರಂದು ಮುಂಜಾನೆ ಭದ್ರತಾ ಪಡೆಗಳ ಸೇನೆ ಮತ್ತು ನಿಷೇಧ ಹೇರಿದ್ಧ ನಕ್ಸಲ್ ಸಂಘಟನೆ ‘ಥರ್ಡ್ ಕಾನ್ಫರೆನ್ಸ್ ಪ್ರೆಸೆಂಟೇಶನ್ ಕಮಿಟಿ’ (ಟಿ.ಎಸ್.ಪಿ.ಸಿ.) (ಸಿಪಿಐ-ಮಾವೋವಾದಿ ಗುಂಪು) ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಇಬ್ಬರು ಸೈನಿಕರು ವೀರ ಮರಣ ಹೊಂದಿದ್ದಾರೆ. ಸಂತನ ಕುಮಾರ ಮತ್ತು ಸುನಿಲ ರಾಮ ಎಂದು ಅವರ ಹೆಸರಿದೆ. ಈ ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
ಟಿ.ಎಸ್.ಪಿ.ಸಿ. ವಲಯ ಕಮಾಂಡರ್ ಶಶಿಕಾಂತ್ ಗಂಜೂ ತಮ್ಮ ಕೇದಲ ಗ್ರಾಮದಲ್ಲಿ ನಡೆಯುತ್ತಿರುವ ಉತ್ಸವಕ್ಕೆ ಬರುವ ಸಾಧ್ಯತೆಯಿದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಶಶಿಕಾಂತ್ ಮೇಲೆ 10 ಲಕ್ಷ ರೂಪಾಯಿ ಬಹುಮಾನವಿದೆ. ಈ ಆಧಾರದ ಮೇಲೆ ಪೊಲೀಸರು ವಿಶೇಷ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಪೊಲೀಸರ ತಂಡ ಗ್ರಾಮದ ಬಳಿ ತಲುಪುತ್ತಿದ್ದಂತೆ ನಕ್ಸಲರಿಗೆ ಇದರ ಮಾಹಿತಿ ಸಿಕ್ಕಿದೆ. ಶಶಿಕಾಂತ್ ಗಂಜೂ ಮತ್ತು ಅವರ ನಕ್ಸಲ್ ಸಹಚರರು ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸಹ ಪ್ರತಿದಾಳಿ ನಡೆಸಿದ್ದಾರೆ. ಈ ಗುಂಡಿನ ಚಕಮಕಿಯ ನಂತರ, ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದಿದ್ದು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ