
ಭಿವಂಡಿ (ಠಾಣೆ ಜಿಲ್ಲೆ) – ಆಗಸ್ಟ್ 30ರಂದು ಇಲ್ಲಿನ ಈದ್ಗಾ ಕೊಳಚೆ ಪ್ರದೇಶದ ಸಮೀಪದ ಜೌಗು ಪ್ರದೇಶದಲ್ಲಿ ಮಹಿಳೆಯೊಬ್ಬರ ತಲೆ ಪತ್ತೆಯಾಗಿತ್ತು. ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ಆ ಮಹಿಳೆಯು ಹತ್ಯೆಗೀಡಾಗಿದ್ದು, ಆಕೆಯ ಹೆಸರು ಪರ್ವೀನ್ ಅಲಿಯಾಸ್ ಮುಸ್ಕಾನ್ (ವಯಸ್ಸು 26 ವರ್ಷ) ಎಂದು ತಿಳಿದುಬಂದಿದೆ. ಆಕೆಯನ್ನು ಹತ್ಯೆ ಮಾಡಿದ ಪತಿ ತಹಾ ಇಮ್ತಿಯಾಜ್ ಅನ್ಸಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಭಿವಂಡಿ ನ್ಯಾಯಾಲಯವು ಸೆಪ್ಟೆಂಬರ್ 11ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಅನ್ಸಾರಿ ಪತ್ನಿಯನ್ನು ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈಯಕ್ತಿಕ ಅನುಮಾನಗಳಿಂದಾಗಿ ಅವರಿಬ್ಬರ ನಡುವೆ ಜಗಳ ಹಾಗೂ ಹೊಡೆದಾಟ ನಡೆಯುತ್ತಿತ್ತು. ಇದರಿಂದ ಕೋಪಗೊಂಡ ಆಕೆ ಮನೆಯಿಂದ ಹೊರಗೆ ಹೋಗಿದ್ದಳು. ಮರಳಿ ಬಂದ ಮರುದಿನವೇ ಆತ ಹತ್ಯೆ ಮಾಡಿದ್ದಾನೆ. ಆಕೆಯ ತಲೆಯನ್ನು ದೇಹದಿಂದ ಬೇರ್ಪಡಿಸಿ, ಕಣಿವೆಯಲ್ಲಿ ನೀರಿನ ಮಟ್ಟ ಹೆಚ್ಚಿದ್ದ ಕಾರಣ ಅಲ್ಲಿ ಎಸೆದಿದ್ದಾನೆ. ಆಕೆಯ ದೇಹ ಇನ್ನೂ ಪತ್ತೆಯಾಗಿಲ್ಲ.
ಸಂಪಾದಕೀಯ ನಿಲುವುಇಂತಹ ಕ್ರೂರ ಮತ್ತು ವಿಕೃತ ಮನಸ್ಥಿತಿಯವರಿಗೆ ಜೀವಾವಧಿ ಶಿಕ್ಷೆ ನೀಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!