
ಇಂಫಾಲ/ನವದೆಹಲಿ – ಮಣಿಪುರದಲ್ಲಿ ಶಾಂತಿಗೆ ದಾರಿ ಸುಗಮವಾಗಿದೆ. ರಾಜ್ಯದ ಕುಕಿ ಮತ್ತು ಝೋಮಿ ಸಮುದಾಯಗಳ ಒಂದು ವರ್ಗವನ್ನು ಪ್ರತಿನಿಧಿಸುವ ‘ಕುಕಿ-ಝೋ ಪರಿಷತ್’ ಪ್ರಯಾಣಿಕರು ಮತ್ತು ಸರಕುಗಳ ಮುಕ್ತ ಸಂಚಾರಕ್ಕಾಗಿ ರಾಜ್ಯದ ಜೀವನಾಡಿಯೆಂದು ಪರಿಗಣಿಸಲ್ಪಟ್ಟಿರುವ ‘ರಾಷ್ಟ್ರೀಯ ಹೆದ್ದಾರಿ-2’ ಅನ್ನು ತೆರೆಯಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾತುಕತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ‘ಕುಕಿ-ಝೋ ಪರಿಷತ್’ ಕೇಂದ್ರ ಸರಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಮನವಿಯಲ್ಲಿ ಇದನ್ನು ದೃಢಪಡಿಸಿದೆ.
ಕುಕಿ ಬಂಡುಕೋರ ಗುಂಪುಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವಿನ ತ್ರಿಪಕ್ಷೀಯ ಒಪ್ಪಂದದಲ್ಲಿ, ಮಣಿಪುರದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ತರಲು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವ ಅಗತ್ಯದ ಬಗ್ಗೆ ಒಪ್ಪಂದವಾಯಿತು. ಅಪಾಯಕಾರಿ ಪ್ರದೇಶಗಳಿಂದ ನಿರಾಶ್ರಿತರ ಶಿಬಿರಗಳನ್ನು ಸ್ಥಳಾಂತರಿಸಲಾಗುವುದು ಎಂದು ಒಪ್ಪಂದದಲ್ಲಿ ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಗೃಹ ಸಚಿವಾಲಯ ಮತ್ತು ‘ಕುಕಿ-ಝೋ ಪರಿಷತ್’ ನಡುವೆ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಚರ್ಚೆ ನಡೆಯುತ್ತಿತ್ತು. ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಕಳೆದ ಫೆಬ್ರವರಿಯಲ್ಲಿ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಧಾನಸಭೆಯನ್ನು ಸ್ಥಗಿತಗೊಳಿಸಲಾಗಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ