
ಜಾರ್ಖಂಡ್ – ಇಲ್ಲಿನ ಗಢವಾ ಜಿಲ್ಲೆಯಲ್ಲಿ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹತ್ಯೆಗಾಗಿ ಸಾಗಿಸಲಾಗುತ್ತಿದ್ದ 200ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 4 ರಂದು ಗೋವುಗಳ ಕಳ್ಳಸಾಗಣೆ ಬಗ್ಗೆ ಬಜರಂಗ ದಳದ ಜಿಲ್ಲಾ ಮುಖ್ಯಸ್ಥ ಸೋನು ಸಿಂಗ್ ಅವರಿಗೆ ಮಾಹಿತಿ ಲಭಿಸಿತ್ತು. (‘ಎಲ್ಲ ವ್ಯವಸ್ಥೆಗಳು ಕೈಯಲ್ಲಿ ಇದ್ದರೂ ಪೊಲೀಸರಿಗೆ ಈ ಮಾಹಿತಿ ಏಕೆ ಸಿಗುವುದಿಲ್ಲ?’ – ಸಂಪಾದಕರು) ‘200ಕ್ಕೂ ಹೆಚ್ಚು ಗೋವುಗಳನ್ನು ಸಾಮರ್ಥ್ಯಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಭಾರೀ ವಾಹನಗಳಲ್ಲಿ ತುಂಬಿ ಸಾಗಿಸಲಾಗುತ್ತಿದೆ’ ಎಂದು ಗೋರಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಮತ್ತು ಗೋರಕ್ಷಕರು ಭಾರೀ ವಾಹನಗಳನ್ನು ತಡೆಯಲು ಯತ್ನಿಸಿದಾಗ, ಗೋ ಕಳ್ಳಸಾಗಣೆದಾರರು ಅವರ ಮೇಲೆ ದಾಳಿ ಮಾಡಲು ಯತ್ನಿಸಿದರು; ಆದರೆ ಪೊಲೀಸರು ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಗೋವುಗಳನ್ನು ಪಲಾಮುವಿನಲ್ಲಿರುವ ಗೋಶಾಲೆಗೆ ಕಳುಹಿಸಲಾಗಿದೆ. ‘ಜನರು ನಮಗೆ ಗೋವುಗಳನ್ನು ಮಾರಾಟ ಮಾಡಿದ್ದರು’ ಎಂದು ಗೋ ಕಳ್ಳಸಾಗಣೆದಾರರು ಹೇಳಿಕೊಂಡಿದ್ದಾರೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಕೇವಲ ಗೋರಕ್ಷಕರ ಪ್ರಯತ್ನದಿಂದ ಗೋಹಂತಕರು ತಮ್ಮ ಕೃತ್ಯಗಳನ್ನು ನಿಲ್ಲಿಸುವುದಿಲ್ಲ. ನಕ್ಸಲರಂತೆ ಗೋಹತ್ಯೆಯ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad