
ಜಾರ್ಖಂಡ್ – ಇಲ್ಲಿನ ಗಢವಾ ಜಿಲ್ಲೆಯಲ್ಲಿ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹತ್ಯೆಗಾಗಿ ಸಾಗಿಸಲಾಗುತ್ತಿದ್ದ 200ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 4 ರಂದು ಗೋವುಗಳ ಕಳ್ಳಸಾಗಣೆ ಬಗ್ಗೆ ಬಜರಂಗ ದಳದ ಜಿಲ್ಲಾ ಮುಖ್ಯಸ್ಥ ಸೋನು ಸಿಂಗ್ ಅವರಿಗೆ ಮಾಹಿತಿ ಲಭಿಸಿತ್ತು. (‘ಎಲ್ಲ ವ್ಯವಸ್ಥೆಗಳು ಕೈಯಲ್ಲಿ ಇದ್ದರೂ ಪೊಲೀಸರಿಗೆ ಈ ಮಾಹಿತಿ ಏಕೆ ಸಿಗುವುದಿಲ್ಲ?’ – ಸಂಪಾದಕರು) ‘200ಕ್ಕೂ ಹೆಚ್ಚು ಗೋವುಗಳನ್ನು ಸಾಮರ್ಥ್ಯಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಭಾರೀ ವಾಹನಗಳಲ್ಲಿ ತುಂಬಿ ಸಾಗಿಸಲಾಗುತ್ತಿದೆ’ ಎಂದು ಗೋರಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಮತ್ತು ಗೋರಕ್ಷಕರು ಭಾರೀ ವಾಹನಗಳನ್ನು ತಡೆಯಲು ಯತ್ನಿಸಿದಾಗ, ಗೋ ಕಳ್ಳಸಾಗಣೆದಾರರು ಅವರ ಮೇಲೆ ದಾಳಿ ಮಾಡಲು ಯತ್ನಿಸಿದರು; ಆದರೆ ಪೊಲೀಸರು ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಗೋವುಗಳನ್ನು ಪಲಾಮುವಿನಲ್ಲಿರುವ ಗೋಶಾಲೆಗೆ ಕಳುಹಿಸಲಾಗಿದೆ. ‘ಜನರು ನಮಗೆ ಗೋವುಗಳನ್ನು ಮಾರಾಟ ಮಾಡಿದ್ದರು’ ಎಂದು ಗೋ ಕಳ್ಳಸಾಗಣೆದಾರರು ಹೇಳಿಕೊಂಡಿದ್ದಾರೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಕೇವಲ ಗೋರಕ್ಷಕರ ಪ್ರಯತ್ನದಿಂದ ಗೋಹಂತಕರು ತಮ್ಮ ಕೃತ್ಯಗಳನ್ನು ನಿಲ್ಲಿಸುವುದಿಲ್ಲ. ನಕ್ಸಲರಂತೆ ಗೋಹತ್ಯೆಯ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ