ಜಮ್ಮು- ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕನ ಹತ್ಯೆ, ಓರ್ವ ಸೈನಿಕ ವೀರ ಮರಣ

ಶ್ರೀನಗರ – ಜಮ್ಮು- ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕ ಹತನಾಗಿದ್ದಾನೆ. ಈ ಘರ್ಷಣೆಯಲ್ಲಿ ಓರ್ವ ಸೈನಿಕ ವೀರಮರಣವನ್ನಪ್ಪಿದ್ದಾನೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಸಪ್ಟೆಂಬರ್ 8 ರಂದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು.

ಸೈನಿಕರು ತಮ್ಮನ್ನು ಸುತ್ತುವರಿದಿರುವುದನ್ನು ಕಂಡ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳೂ ಗುಂಡಿನ ದಾಳಿ ನಡೆಸಿದವು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಉಗ್ರರ ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಪಡೆ ಯೋಧ ವೀರಮರನವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸಂಪಾದಕೀಯ ನಿಲುವು

ಎಲ್ಲಿಯವರೆಗೆ ಭಯೋತ್ಪಾದನೆಯ ಕಾರ್ಖಾನೆಯಾಗಿರುವ ಪಾಕಿಸ್ತಾನದ ನಿರ್ಮೂಲನೆ ಗಾಗಿ ಭಾರತವು ಕಠಿಣ ಕ್ರಮ ಕೈಗೊಳ್ಳುವುದಿಲ್ಲವೋ ಅಲ್ಲಿಯವರೆಗೆ ಭಾರತೀಯ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಲೇ ಇರುವರು, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !