
(‘ಇಸ್ರೋ’ ಎಂದರೆ ‘ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್’)
ಬೆಂಗಳೂರು – ‘ಆಪರೇಷನ್ ಸಿಂದೂರ್’ನಲ್ಲಿ ಭಾರತೀಯ ಸೇನೆಗೆ ಸಹಾಯ ಮಾಡಲು ‘ಇಸ್ರೋ’ದ 400 ವಿಜ್ಞಾನಿಗಳು ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ‘ಇಸ್ರೋ’ ಮುಖ್ಯಸ್ಥ ವಿ. ನಾರಾಯಣನ್ ಅವರು ಮಾಹಿತಿ ನೀಡಿದರು. ಅವರು ‘ಆಲ್ ಇಂಡಿಯಾ ಮ್ಯಾನೇಜಮೆಂಟ್ ಅಸೋಸಿಯೇಷನ್’ (ಎ.ಐ.ಎಂ.ಎ.)ದ 52ನೇ ರಾಷ್ಟ್ರೀಯ ನಿರ್ವಹಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ಭಾರತೀಯ ಸೇನೆಯು ‘ಆಪರೇಷನ್ ಸಿಂದೂರ್’ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೆ. ಈ ಕಾರ್ಯಾಚರಣೆಯಡಿಯಲ್ಲಿ ಸೇನೆಯು ನಿಖರವಾದ ವೈಮಾನಿಕ ದಾಳಿಗಳನ್ನು ನಡೆಸಿ ಪಾಕಿಸ್ತಾನದಲ್ಲಿನ ಹಲವು ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿತು.
ನಾರಾಯಣನ್ ಅವರು ಮಾತು ಮುಂದುವರೆಸಿ,
1. ‘ಆಪರೇಷನ್ ಸಿಂದೂರ್’ ಸಮಯದಲ್ಲಿ ಎಲ್ಲಾ ಉಪಗ್ರಹಗಳು ಹಗಲಿರುಳು ಸುಗಮವಾಗಿ ಕೆಲಸ ಮಾಡುತ್ತಿದ್ದವು.
2. 400ಕ್ಕೂ ಹೆಚ್ಚು ವಿಜ್ಞಾನಿಗಳು ರಕ್ಷಣಾ ಪಡೆಗಳಿಗೆ ನಿಖರವಾದ ಮಾಹಿತಿ ಒದಗಿಸಲು ಹಗಲಿರುಳು ಕೆಲಸ ಮಾಡಿದರು. ಇದರಿಂದ ಸೇನೆಗೆ ನಿಖರ ಗುರಿ ತಲುಪಲು ಸಹಾಯವಾಯಿತು.
3. ಇಸ್ರೋ’ದ ಕನಿಷ್ಠ 10 ಉಪಗ್ರಹಗಳು ದೇಶದ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 24 ಗಂಟೆಗಳ ಕಾಲ ಕೆಲಸ ಮಾಡಿದವು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ