
ನವದೆಹಲಿ – ಸರ್ವೋಚ್ಚ ನ್ಯಾಯಾಲಯವು ‘ವಕ್ಫ್ ಸುಧಾರಣಾ ಕಾಯ್ದೆ, 2025’ ರ ಕೆಲವು ನಿಬಂಧನೆಗಳಿಗೆ ತಡೆಯಾಜ್ಞೆ ನೀಡಿದೆ. ‘ಈ ಕಾಯ್ದೆಯನ್ನು ಅಪರೂಪದ ಪ್ರಕರಣಗಳಲ್ಲಿ ಮಾತ್ರ ರದ್ದುಗೊಳಿಸಬಹುದು’ ಎಂದು ನ್ಯಾಯಾಲಯ ಹೇಳಿದೆ. ಈ ತೀರ್ಪಿನ ಪ್ರಕಾರ, ವಕ್ಫ್ ಆಸ್ತಿಯನ್ನು ನಿರ್ಧರಿಸಲು ಒಬ್ಬ ವ್ಯಕ್ತಿಯು ಐದು ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಯಾಯಿಯಾಗಿರಬೇಕೆಂಬ ನಿಬಂಧನೆಗೆ ತಡೆ ನೀಡಲಾಗಿದೆ. ರಾಜ್ಯ ಸರಕಾರಗಳು ಒಬ್ಬ ವ್ಯಕ್ತಿ ಇಸ್ಲಾಮ್ ಅನುಯಾಯಿಯೇ ಎಂದು ನಿರ್ಧರಿಸಲು ನಿಯಮಗಳನ್ನು ರೂಪಿಸುವವರೆಗೆ ಈ ನಿಬಂಧನೆಗಳ ಮೇಲಿನ ತಡೆಯಾಜ್ಞೆ ಮುಂದುವರಿಯಲಿದೆ. ಈ ಕಾಯಿದೆಯು ಸರಕಾರದಿಂದ ನೇಮಕಗೊಂಡ ಅಧಿಕಾರಿಗೆ ವಕ್ಫ್ ಆಸ್ತಿಯು ಸರಕಾರಿ ಆಸ್ತಿಯನ್ನು ಅತಿಕ್ರಮಿಸಿಕೊಂಡಿದೆಯೇ ಎಂದು ನಿರ್ಧರಿಸುವ ಅಧಿಕಾರವನ್ನು ನೀಡಿತ್ತು.
1. ಇದಕ್ಕೂ ಮೊದಲು, ಮೇ 22 ರಂದು ಸತತ ಮೂರು ದಿನಗಳ ವಿಚಾರಣೆಯ ನಂತರ, ನ್ಯಾಯಾಲಯವು ತನ್ನ ನಿರ್ಧಾರವನ್ನು ಕಾಯ್ದಿರಿಸಿತ್ತು. ಹಿಂದಿನ ವಿಚಾರಣೆಯಲ್ಲಿ, ಅರ್ಜಿದಾರರು ಈ ಕಾಯ್ದೆಯು ಮುಸಲ್ಮಾನರ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ, ಅದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿದ್ದರು. ಅದೇ ಸಮಯದಲ್ಲಿ, ಕೇಂದ್ರ ಸರಕಾರವು ಕಾಯ್ದೆಯ ಪರವಾಗಿ ವಾದ ಮಂಡಿಸಿತ್ತು. ವಕ್ಫ್ ಒಂದು ಇಸ್ಲಾಮಿಕ್ ಪರಿಕಲ್ಪನೆಯಾಗಿದ್ದರೂ, ಅದು ಧರ್ಮದ ಅಗತ್ಯ ಭಾಗವಲ್ಲ, ಆದ್ದರಿಂದ ಇದು ಮೂಲಭೂತ ಹಕ್ಕಲ್ಲ ಎಂದು ಸರಕಾರ ವಾದಿಸಿತ್ತು.
2. ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪಿನಲ್ಲಿ, ಒಟ್ಟು 11 ವಕ್ಫ್ ಬೋರ್ಡ್ ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರಿರಬಾರದು ಮತ್ತು ರಾಜ್ಯ ಮಂಡಳಿಗಳಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರಿರಬಾರದು ಎಂದು ಕೂಡ ಹೇಳಲಾಗಿದೆ.
3. ವಕ್ಫ್ ಸುಧಾರಣಾ ಕಾಯ್ದೆಯ ವಿರುದ್ಧದ ಕೇವಲ ಐದು ಪ್ರಮುಖ ಅರ್ಜಿಗಳನ್ನು ಮಾತ್ರ ಸರ್ವೋಚ್ಚ ನ್ಯಾಯಾಲಯ ವಿಚಾರಣೆ ನಡೆಸಿತು. ಇದರಲ್ಲಿ ಸಂಸದ ಅಸದುದ್ದೀನ್ ಓವೈಸಿ ಅವರ ಅರ್ಜಿಯೂ ಸೇರಿತ್ತು. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ನ್ಯಾಯಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಅರ್ಜಿದಾರರ ಪರವಾಗಿ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಧವನ್ ವಾದ ಮಂಡಿಸಿದರು.
4. ಕೇಂದ್ರವು ಏಪ್ರಿಲ್ನಲ್ಲಿ ವಕ್ಫ್ ಸುಧಾರಣಾ ಮಸೂದೆ, 2025 ಅನ್ನು ಅಧಿಸೂಚನೆ ಹೊರಡಿಸಿತ್ತು. ಅದು ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯನ್ನು ಪಡೆಯಿತು. ಈ ಮಸೂದೆಯು ಲೋಕಸಭೆಯಲ್ಲಿ 288 ಸದಸ್ಯರ ಬೆಂಬಲದೊಂದಿಗೆ ಅಂಗೀಕಾರಗೊಂಡರೆ, 232 ಸಂಸದರು ವಿರೋಧಿಸಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ