ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ತೀರ್ಪನ್ನು ಪ್ರಶ್ನಿಸಿದವರಿಗೆ ಮುಂಬಯಿ ಉಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ!

ಮುಂಬಯಿ – 2008ರ ಮಾಲೆಗಾಂವ್ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ 6 ಜನರ ಸಂಬಂಧಿಕರು, ವಿಶೇಷ ನ್ಯಾಯಾಲಯವು 7 ಜನರನ್ನು ನಿರಪರಾಧಿಗಳೆಂದು ಬಿಡುಗಡೆ ಮಾಡಿದ ತೀರ್ಪನ್ನು ಮುಂಬಯಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದರು. ಈ ಏಳು ಜನರನ್ನು ನಿರಪರಾಧಿಗಳೆಂದು ಬಿಡುಗಡೆ ಮಾಡಿದ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸಲು ಅವರು ಒತ್ತಾಯಿಸಿದರು; ಆದರೆ, ಸಂತ್ರಸ್ತರ ಸಂಬಂಧಿಕರು ಈ ಪ್ರಕರಣದಲ್ಲಿ ಸಾಕ್ಷಿಗಳಾಗಿರಲಿಲ್ಲ. ಆದ್ದರಿಂದ, ‘ನಿರಪರಾಧಿಗಳ ಬಿಡುಗಡೆಯ ತೀರ್ಪಿನ ವಿರುದ್ಧ ಪ್ರತಿಯೊಬ್ಬರೂ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ’ ಎಂದು ಹೇಳುತ್ತಾ, ಮುಂಬಯಿ ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ 16 ರಂದು ಈ ಬೇಡಿಕೆ ಸಲ್ಲಿಸಿದವರನ್ನು ತರಾಟೆಗೆ ತೆಗೆದುಕೊಂಡಿತು. ‘ಅಪೀಲದಾರರ (ಈ ಬೇಡಿಕೆ ಸಲ್ಲಿಸಿದವರ) ಎಲ್ಲ ವಿವರಗಳನ್ನು ಸಲ್ಲಿಸಬೇಕು’ ಎಂದು ಹೇಳುತ್ತಾ, ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ.
ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಎ. ಅಖಂಡ ಅವರ ನ್ಯಾಯಪೀಠದ ಮುಂದೆ ನಿಸಾರ್ ಅಹಮದ್ ಹಾಜಿ ಸಯ್ಯದ್ ಬಿಲಾಲ್, ಶೇಖ್ ಲಿಯಾಕತ್ ಮೊಹಿಯುದ್ದೀನ್, ಶೇಖ್ ಇಶಾಕ್ ಶೇಖ್ ಯೂಸುಫ್, ಉಸ್ಮಾನ್ ಖಾನ್ ಐನುಲ್ಲಾ ಖಾನ್, ಮುಷ್ತಾಕ್ ಶಾ ಹಾರೂನ್ ಶಾ ಮತ್ತು ಶೇಖ್ ಇಬ್ರಾಹಿಮ್ ಶೇಖ್ ಸುಪದೋ ಅವರು ಸವಾಲಿನ ಅರ್ಜಿಯನ್ನು ಸಲ್ಲಿಸಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ