|

ಗೋರಖಪುರ (ಉತ್ತರ ಪ್ರದೇಶ) – ಗೋರಖಪುರದ ಪಿಪರೈಚ ಪ್ರದೇಶದ ಧೂಷಣ ಮಹುವಾ ಚಾಪಿಯಲ್ಲಿ ರಾತ್ರಿಯಲ್ಲಿ ಗೋ ಕಳ್ಳಸಾಗಣೆದಾರರು ವಿದ್ಯಾರ್ಥಿಯೊಬ್ಬನನ್ನು ಹೊಡೆದು ಕೊಂದರು. ಕಳ್ಳಸಾಗಣೆದಾರರು ವಿದ್ಯಾರ್ಥಿಯನ್ನು ಕಾರಿನಿಂದ ಹೊರಗೆ ತಳ್ಳಿದರು, ಇದರಿಂದಾಗಿ ಅವನ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪಿದನು. ಈ ಘಟನೆಯಿಂದಾಗಿ, ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಲ್ಲಿ ಅನೇಕ ಪೊಲೀಸರು ಗಾಯಗೊಂಡರು. ಇದರೊಂದಿಗೆ ಒಂದು ವಾಹನಕ್ಕೆ ಬೆಂಕಿ ಹಚ್ಚಲಾಯಿತು.
ಪೊಲೀಸರು ಗೋ -ಕಳ್ಳಸಾಗಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ವಿದ್ಯಾರ್ಥಿಯ ಕೊಲೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದಾಗಿ ನಾಗರಿಕರು ಪ್ರತಿಭಟನೆ ನಡೆಸಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.
ಸಂಪಾದಕೀಯ ನಿಲುವು
|
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!