
ನವದೆಹಲಿ – ನಕ್ಸಲೀಯರ ವಿರುದ್ಧ ಅರೆಸೇನಾ ಪಡೆಗಳಿಂದ ಆಕ್ರಮಣಕಾರಿ ಕಾರ್ಯಾಚರಣೆ ಮುಂದುವರಿದಿದೆ. ಮಾರ್ಚ್ 31, 2026 ರೊಳಗೆ ದೇಶವನ್ನು ನಕ್ಸಲ್-ಮುಕ್ತಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ನಕ್ಸಲ್ ಸಂಘಟನೆಗಳ ಹಲವು ಹಿರಿಯ ಕಮಾಂಡರ್ಗಳನ್ನು ಹತ್ಯೆ ಮಾಡಲಾಗಿದೆ. ಇದಾದ ನಂತರ, ನಕ್ಸಲ್ ಸಂಘಟನೆಗಳು ಶಾಂತಿಯ ಪ್ರಸ್ತಾಪವನ್ನು ಮುಂದಿಟ್ಟು, ಒಂದು ತಿಂಗಳ ಕದನ ವಿರಾಮಕ್ಕೆ ಬೇಡಿಕೆಯಿಟ್ಟಿದ್ದವು. ಈ ಸಶಸ್ತ್ರ ಹೋರಾಟದ ಕದನ ವಿರಾಮಕ್ಕೆ ಒಂದು ತಿಂಗಳು ಪೂರ್ಣಗೊಂಡಿದೆ. ನಕ್ಸಲೀಯರು ಆಗಸ್ಟ್ 15 ರಂದು ಕದನ ವಿರಾಮಕ್ಕಾಗಿ ಪತ್ರ ಬರೆದಿದ್ದರು. ಸೆಪ್ಟೆಂಬರ್ 16 ರಂದು 1 ತಿಂಗಳ ಅವಧಿ ಪೂರ್ಣಗೊಂಡಿದೆ. ‘ಶಾಂತಿಗಾಗಿ ಪ್ರಯತ್ನಗಳು ನಡೆಯುತ್ತಿವೆ, ಆದರೆ ಹಿಂಸಾಚಾರ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಹಾ ಖಡಕ್ ಆಗಿ ಹೇಳಿದ್ದರು.
1. ಜನವರಿ 2024 ರಲ್ಲಿ, ಭದ್ರತಾ ಪಡೆಗಳ ಸೈನಿಕರು ನಕ್ಸಲೀಯರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದರು.
2. ಕಳೆದ 60 ವರ್ಷಗಳಲ್ಲಿ ನಕ್ಸಲ್ ದಾಳಿಗಳಲ್ಲಿ 4,000 ಹೆಚ್ಚು ನಾಗರಿಕರು ಮತ್ತು 2,500ಕ್ಕೂ ಹೆಚ್ಚು ಭದ್ರತಾ ಪಡೆಗಳ ಸೈನಿಕರು ಸಾವನ್ನಪ್ಪಿದ್ದಾರೆ. ಛತ್ತೀಸ್ಗಢ, ಜಾರ್ಖಂಡ್, ಬಿಹಾರ ಮತ್ತು ಒಡಿಶಾ ಮುಂತಾದ ರಾಜ್ಯಗಳಲ್ಲಿ ಈ ಹಿಂಸಾಚಾರ ನಿರಂತರವಾಗಿ ನಡೆಯುತ್ತಿದೆ.
3. ನಕ್ಸಲೀಯರು ಹಿಂಸಾಚಾರವನ್ನು ಬಿಟ್ಟು ಶರಣಾಗಬೇಕು ಮತ್ತು ಮುಖ್ಯವಾಹಿನಿಗೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ, ನಕ್ಸಲೀಯರಿಗೆ ಅಂತಿಮ ಹೊಡೆತ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಹಾ ಎಚ್ಚರಿಕೆ ನೀಡಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ