
ರಬಾತ್ (ಮೊರಾಕೊ) – ಪಾಕಿಸ್ತಾನ ಆಕ್ರಮಿತ ಕಾಶ್ಮೀರ ತಾನಾಗಿಯೇ ನಮ್ಮದಾಗುತ್ತದೆ. ಅಲ್ಲಿ ಬೇಡಿಕೆಗಳು ಹೆಚ್ಚಾಗುತ್ತಿವೆ; ನೀವು ಘೋಷಣೆಗಳನ್ನು ಕೇಳಿರಬಹುದು. ಐದು ವರ್ಷಗಳ ಹಿಂದೆ ನಾನು ಕಾಶ್ಮೀರ ಕಣಿವೆಯ ಒಂದು ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ನಮಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಆಕ್ರಮಣ ಮಾಡಿ ಅದನ್ನು ವಶಪಡಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಹೇಳಿದ್ದೆ. ಅದು ನಮ್ಮದು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವೇ ‘ನಾನೂ ಸಹ ಭಾರತ’ಎಂದು ಹೇಳುತ್ತದೆ. ಆ ದಿನ ಖಂಡಿತಾ ಬರುತ್ತದೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಇಲ್ಲಿ ಹೇಳಿದ್ದಾರೆ. ಅವರು ಆಫ್ರಿಕಾ ಖಂಡದ ಮೊರಾಕೊ ದೇಶಕ್ಕೆ ಎರಡು ದಿನಗಳ ಪ್ರವಾಸದಲ್ಲಿದ್ದಾಗ ಈ ಹೇಳಿಕೆ ನೀಡಿದ್ದಾರೆ. ಅವರ ಭೇಟಿಯ ಮುಖ್ಯ ಉದ್ದೇಶ ‘ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್’ನ ಹೊಸ ಉತ್ಪಾದನಾ ಘಟಕವನ್ನು ಉದ್ಘಾಟಿಸುವುದಾಗಿತ್ತು, ಇದು ಆಫ್ರಿಕಾದಲ್ಲಿ ಭಾರತದ ಮೊದಲ ರಕ್ಷಣಾ ಉತ್ಪಾದನಾ ಘಟಕವಾಗಿದೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine