|

ಲೆಹ್ (ಲಡಾಖ್) – ಲಡಾಖ್ ಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಮತ್ತು ಸಂವಿಧಾನದ ಆರನೇ ಶೆಡ್ಯೂಲ್ಗೆ ಸೇರಿಸಲು ಒತ್ತಾಯಿಸಿ ಪರಿಸರ ತಜ್ಞ ಸೋನಮ್ ವಾಂಗ್ ಚುಕ್ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಾಂಗ್ ಚುಕ್ಗೆ ಬೆಂಬಲ ನೀಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ರಸ್ತೆಗಿಳಿದಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ ವಾಹನ ಸೇರಿದಂತೆ ಇತರೆ ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಇತರೆ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ನಾಶಪಡಿಸಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ.
ಲಡಾಖ್ ಗೆ ಲೋಕಸಭೆಗೆ 2 ಸ್ಥಾನಗಳು ಮತ್ತು ಲಡಾಖ್ ನ ಆದಿವಾಸಿ ಸಮುದಾಯಕ್ಕೆ ‘ಆದಿವಾಸಿ’ ಸ್ಥಾನಮಾನ ನೀಡುವಂತೆ ವಿದ್ಯಾರ್ಥಿಗಳು ಬೇಡಿಕೆಗಳನ್ನು ಇಟ್ಟಿದ್ದಾರೆ.
ಆಗಸ್ಟ್ 5, 2019ರಂದು ಕಲಂ 370 ಅನ್ನು ತೆಗೆದುಹಾಕಿದ ನಂತರ ಜಮ್ಮು-ಕಾಶ್ಮೀರವನ್ನು ವಿಭಜಿಸಿ ಲಡಾಖ್ ಗೆ ಸ್ವತಂತ್ರ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಯಿತು. ಈಗ ಲಡಾಖ್ ಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುವ ಬೇಡಿಕೆ ಕೇಳಿಬಂದಿದೆ.
ಸಂಪಾದಕೀಯ ನಿಲುವುಇಂತಹ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಿ ಭಾರತವನ್ನು ಅಸ್ಥಿರಗೊಳಿಸುವ ಪಿತೂರಿ ಇದೆಯೇ ಎಂದು ಭದ್ರತಾ ವ್ಯವಸ್ಥೆಗಳು ತನಿಖೆ ಮಾಡುವುದು ಅವಶ್ಯಕ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ