
ಬಡೌತ್ (ಉತ್ತರ ಪ್ರದೇಶ) – ನವರಾತ್ರಿಯ ಉತ್ಸವದಲ್ಲಿ ಮುಸಲ್ಮಾನ ಯುವಕರು ಗರಬಾ ಕಾರ್ಯಕ್ರಮಗಳಲ್ಲಿ ಹಿಂದೂ ಯುವತಿಯರನ್ನು ಚುಡಾಯಿಸುತ್ತಾರೆ. ಈ ಯುವಕರನ್ನು ತಡೆಯುವುದಕ್ಕಾಗಿ ಗರಬಾ ಮತ್ತು ರಾಮಲೀಲಾದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆಧಾರ್ ಕಾರ್ಡ್ ಪರಿಶೀಲಿಸಿದ ನಂತರವೇ ಯುವಕರಿಗೆ ಪ್ರವೇಶ ನೀಡಬೇಕು. ಹಿಂದೂ ಉತ್ಸವಗಳ ನಡುವೆ ನುಸುಳುವುದು ಮುಸ್ಲಿಮರ ಹಳೆಯ ನೀತಿ, ಎಂದು ಸಾಧ್ವಿ ಪ್ರಾಚಿ ಮಾತನಾಡುತ್ತಾ ಹೇಳಿದರು. ಅವರು ಉತ್ತರ ಪ್ರದೇಶದ ಬಡೌತ್ನಲ್ಲಿರುವ ಪಂಚಮುಖಿ ದೇವಾಲಯದಲ್ಲಿ ನಡೆಯುತ್ತಿರುವ ರಾಮಲೀಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನವರಾತ್ರಿಯ ಸಮಯದಲ್ಲಿ ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚಬೇಕು, ಎಂದು ಅವರು ಹೇಳಿದರು. ಗರಬಾ ಆಡುವುದು ಪವಿತ್ರವಾಗಿದ್ದರೆ, ಮುಸ್ಲಿಂ ಕುಟುಂಬಗಳು ತಮ್ಮಹೆಣ್ಣುಮಕ್ಕಳನ್ನು ಗರಬಾ ಆಡುವುದಕ್ಕಾಗಿ ಏಕೆ ಕಳುಹಿಸುವುದಿಲ್ಲ? ಎಂದು ಅವರು ಪ್ರಶ್ನಿಸಿದರು.
ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕು ಇರಬಾರದು ಎಂದು ಅವರು ಹೇಳಿದರು. ಡೆನ್ಮಾರ್ಕ್ನಲ್ಲಿ, ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರ ಮತದಾನದ ಹಕ್ಕುಗಳನ್ನು ತೆಗೆದು ಹಾಕಲಾಗಿದೆ. ಭಾರತದಲ್ಲಿಯೂ ಹೀಗೇ ಆಗಬೇಕು ಎಂದು ಅವರು ಹೇಳಿದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !