
ಅಯೋಧ್ಯೆ (ಉತ್ತರ ಪ್ರದೇಶ) – ಅಯೋಧ್ಯೆ ನಗರದಲ್ಲಿ ಮಸೀದಿ ಇರುವುದಕ್ಕೆ ಅರ್ಥವಿಲ್ಲ. ಅಲ್ಲಿ ಯಾವುದೇ ಮಸೀದಿ ನಿರ್ಮಾಣವಾಗುವುದಿಲ್ಲ ಎಂದು ಶ್ರೀರಾಮ ಮಂದಿರ ಆಂದೋಲನದ ಪ್ರಮುಖ ಸೂತ್ರಧಾರ ಹಾಗೂ ಭಾಜಪಯ ಹಿರಿಯ ನಾಯಕ ವಿನಯ ಕಟಿಯಾರ್ ಹೇಳಿದ್ದಾರೆ. ಸರ್ವೋಚ್ಚ ನ್ಯಾಯಾಲಯ ಆದೇಶದ ನಂತರ ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಸರಕಾರವು ಜಮೀನು ನೀಡಿತ್ತು. ಮಸೀದಿಯ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ‘ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್’ ಸಲ್ಲಿಸಿದ್ದ ಮಸೀದಿಯ ನಕ್ಷೆಯನ್ನು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ತಿರಸ್ಕರಿಸಿದೆ. ಆ ವಿಷಯದ ಕುರಿತು ಅವರು ಮಾತನಾಡುತ್ತಾ, ಅಯೋಧ್ಯೆಯಲ್ಲಿ ಮುಸ್ಲಿಮರಿಗೆ ಏನು ಕೆಲಸ? ಅವರು ಸರಯೂ ನದಿಯ ಆಚೆ ದಡದಲ್ಲಿರುವ ಗೊಂಡಾ ಅಥವಾ ಬಸ್ತಿಯಲ್ಲಿ ವಾಸಿಸಬೇಕು. ಅಯೋಧ್ಯೆಯು ಪ್ರಭು ಶ್ರೀರಾಮನ ನಗರವಾಗಿದೆ ಮತ್ತು ಇಲ್ಲಿ ಶ್ರೀರಾಮ ಮಂದಿರ ಮಾತ್ರ ಇರುತ್ತದೆ, ಬೇರೇನೂ ಇರುವುದಿಲ್ಲ ಎಂದು ಹೇಳಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!