ವಿಶ್ವಸಂಸ್ಥೆಯಲ್ಲಿ ಪರೋಕ್ಷವಾಗಿ ಪಾಕಿಸ್ತಾನವನ್ನು ತರಾಟೆ ತೆಗೆದುಕೊಂಡ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ !

ನ್ಯೂಯಾರ್ಕ್ (ಅಮೇರಿಕಾ) – ಸ್ವಾತಂತ್ರ್ಯದಿಂದಲೂ ಭಾರತವು ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿರುವ ನೆರೆಯ ದೇಶವನ್ನು (ಪಾಕಿಸ್ತಾನ) ಎದುರಿಸಬೇಕಾಗಿದೆ. ಅನೇಕ ದಶಕಗಳಿಂದ ದೊಡ್ಡ ಅಂತರರಾಷ್ಟ್ರೀಯ ಭಯೋತ್ಪಾದಕ ದಾಳಿಗಳು ಅದೇ ದೇಶದಲ್ಲಿ ನಡೆಯುತ್ತಿವೆ. ಅಲ್ಲಿನ ನಾಗರಿಕರು ವಿಶ್ವಸಂಸ್ಥೆಯ ಭಯೋತ್ಪಾದಕರ ಪಟ್ಟಿಯಲ್ಲಿ ಪ್ರಮುಖರಾಗಿದ್ದಾರೆ. ಪಹಲ್ಗಾಮ್ನಲ್ಲಿ ಕ್ರೂರ ಭಯೋತ್ಪಾದಕ ದಾಳಿಯಾದ ನಂತರ, ಭಾರತವು ಭಯೋತ್ಪಾದಕರ ನೆಲೆಗಳ ಮೇಲೆ ಕ್ರಮ ಕೈಗೊಂಡಿತ್ತು. ಭಯೋತ್ಪಾದಕರ ನೆಲೆಗಳು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಭಯೋತ್ಪಾದಕರನ್ನು ಬಹಿರಂಗವಾಗಿ ವೈಭವೀಕರಿಸಲಾಗುತ್ತದೆ. ಭಯೋತ್ಪಾದಕರಿಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸಬೇಕು, ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಹೆಸರು ಹೇಳದೆ ಅದನ್ನು ಬಯಲಿಗೆಳೆದರು.
ಜೈಶಂಕರ್ ಅವರು ಮಾತು ಮುಂದುವರೆಸಿ, ಭಾರತದ ಸೈನಿಕರು ಶಾಂತಿಯನ್ನು ಕಾಪಾಡುತ್ತಾರೆ. ನೌಕಾಪಡೆಯು ದೊಡ್ಡ ಹಡಗುಗಳನ್ನು ರಕ್ಷಿಸುತ್ತದೆ, ಭದ್ರತಾ ಪಡೆಗಳು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತವೆ, ವೈದ್ಯರು ಮತ್ತು ಶಿಕ್ಷಕರು ಜಗತ್ತಿನಾದ್ಯಂತ ಮಾನವ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ, ಭಾರತೀಯ ಕೈಗಾರಿಕೆಗಳು ಕೈಗೆಟುಕುವ ಉತ್ಪನ್ನಗಳನ್ನು ತಯಾರಿಸುತ್ತವೆ, ತಂತ್ರಜ್ಞರು ‘ಡಿಜಿಟಲೀಕರಣ’ವನ್ನು ಉತ್ತೇಜಿಸುತ್ತಾರೆ ಮತ್ತು ತರಬೇತಿ ಕೇಂದ್ರಗಳನ್ನು ಜಗತ್ತಿಗೆ ಮುಕ್ತವಾಗಿರಿಸಲಾಗಿದೆ. ಇದೆಲ್ಲವೂ ಭಾರತದ ವಿದೇಶಾಂಗ ನೀತಿಯ ಕೇಂದ್ರದಲ್ಲಿದೆ, ಎಂದು ಹೇಳಿದರು.
ಸಂಪಾದಕೀಯ ನಿಲುವುಇಂತಹ ಭಯೋತ್ಪಾದಕ ಕೇಂದ್ರವನ್ನು ಭಾರತ ಬಹಿಷ್ಕರಿಸಬೇಕು ಮತ್ತು ಜಗತ್ತಿಗೂ ಬಹಿಷ್ಕರಿಸುವಂತೆ ಕರೆ ನೀಡಬೇಕು. ಆಗ ಮಾತ್ರ ಪಾಕಿಸ್ತಾನದ ಮೇಲೆ ಪರಿಣಾಮ ಬೀರಲು ಸಾಧ್ಯ! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !