|

ಕಟಕ (ಒಡಿಶಾ) – ಇಲ್ಲಿ ಅಕ್ಟೋಬರ್ ೫ ರ ರಾತ್ರಿ ತಡವಾಗಿ ದುರ್ಗಾಪೂಜಾ ವಿಸರ್ಜನೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಕಟಕದ ದರಗಾಬಜಾರ್ ಎಂಬ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಿಂದ ದೇವೀಗರಾ ಬಳಿಯ ನದಿಯ ದಡದ ಕಡೆಗೆ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಮಧ್ಯರಾತ್ರಿ ಒಂದೂವರೆ ಗಂಟೆಗೆ ಹಾತಿ ಪೋಖರಿ ಪ್ರದೇಶದಲ್ಲಿ ಹಿಂಸಾಚಾರ ನಡೆಯಿತು. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಮೆರವಣಿಗೆಯ ಸಮಯದಲ್ಲಿ ಜೋರಾಗಿ ಹಾಕಿದ್ದ ಸಂಗೀತಕ್ಕೆ ಮುಸಲ್ಮಾನರು ಆಕ್ಷೇಪ ವ್ಯಕ್ತಪಡಿಸಿದರು. ಮುಸಲ್ಮಾನರು ಮೇಲ್ಛಾವಣಿಯಿಂದ ಕಲ್ಲುಗಳು ಮತ್ತು ಬಾಟಲಿಗಳನ್ನು ಎಸೆದರು. ಗಾಯಗೊಂಡವರಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ ಜ್ಞಾನದೇವ್ ಅವರೂ ಸೇರಿದ್ದಾರೆ. ಪೊಲೀಸ್ ಅಧಿಕಾರಿಗಳು ಇಡೀ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಲ್ಲಿನ ಇಂಟರ್ನೆಟ್ ಸೇವೆಯನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಿಂಸಾಚಾರದಲ್ಲಿ ೨೫ ಜನರು ಗಾಯಗೊಂಡಿದ್ದು, ಇಲ್ಲಿಯವರೆಗೆ ೬ ಜನರನ್ನು ಬಂಧಿಸಲಾಗಿದೆ.
🚨 Stone-pelting on Durga Puja immersion in Cuttack, Odisha – 25 injured, internet suspended
🧱 Fanatic mobs attacked the procession
🔥 Shops vandalised & set on fire
👮 Police & fire brigade officials also targeted
Be it 🇵🇰 Pakistan, 🇧🇩 Bangladesh or 🇮🇳 India — attacks on… pic.twitter.com/J06Mh1eUUp
— Sanatan Prabhat (@SanatanPrabhat) October 7, 2025
೧. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ಸಮಯದಲ್ಲಿ ಅನೇಕ ವಾಹನಗಳು ಮತ್ತು ಅಂಗಡಿಗಳನ್ನು ಒಡೆದುಹಾಕಲಾಯಿತು.
೨. ವಿಶ್ವ ಹಿಂದೂ ಪರಿಷತ್ ಅಕ್ಟೋಬರ್ ೬ ರಂದು ಬಂದ್ಗೆ ಕರೆ ನೀಡಿತ್ತು. ಪದೇ ಪದೇ ಮನವಿ ಮಾಡಿಕೊಂಡರೂ, ವಿಸರ್ಜನಾ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲು ಆಡಳಿತವು ವಿಫಲವಾಗಿದೆ ಎಂದು ವಿಹಿಂಪ ವಕ್ತಾರರು ಆರೋಪಿಸಿದರು.
೩. ನಗರದ ಗೌರಿಶಂಕರ್ ಪಾರ್ಕ್ ಬಳಿ ಅನೇಕ ಕಡೆಗಳಲ್ಲಿ ಗಲಭೆಕೋರರು ಬೆಂಕಿ ಹಚ್ಚಿದರು. ಅಗ್ನಿಶಾಮಕ ದಳದ ಅಧಿಕಾರಿಗಳ ಮೇಲೂ ಕಲ್ಲು ತೂರಾಟ ನಡೆಸಲಾಯಿತು.
ದೋಷಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಮಾಝಿ ಅವರ ಭರವಸೆ!
ಮುಖ್ಯಮಂತ್ರಿ ಮೋಹನ ಚರಣ ಮಾಝಿ ಅವರು, ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸಿರುವ ಆರೋಪವಿದೆ. ದೋಷಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟವಾಗಲು ಕಟಕ ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ? ಹಿಂದೂಗಳು ಅಲ್ಪಸಂಖ್ಯಾತರಾಗಿರುವ ಪಾಕಿಸ್ತಾನ, ಬಾಂಗ್ಲಾದೇಶವಿರಲಿ ಅಥವಾ ಹಿಂದೂಗಳು ಬಹುಸಂಖ್ಯಾತರಾಗಿರುವ ಭಾರತವಿರಲಿ, ಹಿಂದೂಗಳ ಉತ್ಸವಗಳ ಮೇಲೆ ಎಲ್ಲೆಡೆ ದಾಳಿಗಳು ನಡೆಯುತ್ತವೆ. ಈ ಪರಿಸ್ಥಿತಿ ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ